ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

IISc

ಬೆಂಗಳೂರು
6 Apr 2022

ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು 

ಬೆಂಗಳೂರು
28 Aug 2019

 

ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪನವು ಅತಿ ವಿನಾಶಕಾರಿ ಮತ್ತು ಭಯ ಹುಟ್ಟಿಸುವಂತದ್ದು. ರಿಕ್ಟರ್ ಮಾಪಕದಲ್ಲಿ 5.0 ಅಥವಾ ಅದಕ್ಕಿಂತ ಹೆಚ್ಚಿನ ಪರಿಮಾಣದ ಸರಿಸುಮಾರು 5 ಭೂಕಂಪಗಳು ಪ್ರತಿದಿನ ಭೂಮಿಯ ಮೇಲೆ ಸಂಭವಿಸುತ್ತಲೇ ಇರುತ್ತವೆ. ಸ್ವತಃ ಭೂಕಂಪನಗಳೇ ವಿನಾಶಕಾರಿಯಾಗಿದ್ದು, ಇದರಿಂದ ಉಂಟಾಗಬಹುದಾದ ಸುನಾಮಿ ಅಲೆಗಳಿಂದಲೂ ತಮ್ಮ ಪ್ರಭಾವವನ್ನು ಬೀರಬಲ್ಲವಾಗಿವೆ. ಸಹಜವಾಗಿ  ಭೂಕಂಪನದ ತೀವ್ರತೆ, ಅಧಿಕೇಂದ್ರದಿಂದ ಇರುವ ದೂರ ಮತ್ತು ಆ ಪ್ರದೇಶದ ನೆಲದ ಸ್ವರೂಪ, ಹೀಗೆ ಕೆಲವು ಅಂಶಗಳು ಸಾಮಾನ್ಯವಾಗಿ ಭೂಕಂಪನದಿಂದ ಉಂಟಾಗುವ ಹಾನಿಯನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.

ಬೆಂಗಳೂರು
20 Jan 2020

ನಾವೆಲ್ಲರೂ ಓದುವುದನ್ನು ಹೇಗೆ ಕಲಿತೆವು ಎಂದು ನೆನಪಿಸಿಕೊಂಡರೆ- ಮೊದಲಿಗೆ ನಾವು ಪ್ರತಿಯೊಂದು ಅಕ್ಷರ ಹೇಗೆ ಉಚ್ಚರಿಸುವುದು ಎಂದು ಕಲಿಯುತ್ತೇವೆ. ನಂತರ ಪೂರ್ತಿ ಪದ(ಗಳು)  ಮತ್ತು  ವಾಕ್ಯಗಳನ್ನು ಸುಲಭವಾಗಿ ಹೇಳಲು ಕಲಿಯುತ್ತೇವೆ. ಆದರೆ, ನಾವು ಓದಲು ಕಲಿಯುವಾಗ, ನಮ್ಮ ಮೆದುಳಿನಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಬೆಂಗಳೂರು
14 Feb 2019

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೀಕಾಂತ್ ದೇವಧರ್ ಮತ್ತು ಕವಿತಾ ಈಶ್ವರನ್ ರವರು, ಅತ್ಯಂತ ಆಕರ್ಷಕವಾದ ಪುರುಷ ಅಗಾಮಗಳು (ಹಲ್ಲಿಗಳು) ಪ್ರದರ್ಶಿಸುವ ವಿವಿಧ ವರ್ತನೆಯ ಸಂಕೇತಗಳ ಅರ್ಥವನ್ನು ಡಿಕೋಡ್ ಮಾಡಲು ತಮ್ಮ ಹೊಸ ಅಧ್ಯಯನದಲ್ಲಿ ಪ್ರಯತ್ನಿಸಿದ್ದಾರೆ.

ಬೆಂಗಳೂರು
2 Nov 2018

ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು. ಇಂತಹ ಅನೇಕ ಸಂದರ್ಭಗಳು, ಸನ್ನಿವೇಶಗಳು, ಭಾರತದಲ್ಲಿ ನದಿಗಳ ಮಹತ್ವ ಏನೆಂಬುದನ್ನು ತೋರಿಸಿಕೊಟ್ಟಿವೆ. ನದಿಗಳು ನಮ್ಮ ದೇಶದೊಂದಿಗೆ ಕೇವಲ ನೈಸರ್ಗಿಕವಾದ ಸಂಬಂಧವನ್ನು ಹೊಂದಿಲ್ಲ; ನಾಡಿನ ಜನರ ನಾಡಿಮಿಡಿತದೊಂದಿಗೆ ಭಾವನಾತ್ಮಕವಾದ ಸಂಬಂಧವನ್ನೂ ಹೊಂದಿವೆ.

ಬೆಂಗಳೂರು
26 Jun 2018

ಮನುಷ್ಯರ ಸಮಾಜದಲ್ಲಿ ಇರುವ ಜಾತಿಭೇದವು ಪ್ರಾಣಿ ಜಗತ್ತಿನಲ್ಲಿ ಇಲ್ಲ ಎಂದರೆ ನಂಬುತ್ತೀರಾ? ಇಲ್ಲಿ ನಾವು ಹೇಳಹೊರಟಿರುವುದು ಪ್ರಭೇದಗಳ ಗಡಿಯ ಆಚೆಗೂ ಗೆಳೆತನ ವಿಸ್ತರಿಸಿಕೊಳ್ಳುವ ಪ್ರಾಣಿಗಳ ಬಗ್ಗೆ. ಜನಪ್ರಿಯ ಅನಿಮೇಟೆಡ್ ಚಿತ್ರ 'ಐಸ್ ಏಜ್'ನಲ್ಲಿ ಪ್ರಾಚೀನ ಶಿಲಾಯುಗದ ಹಿಮಯುಗಕ್ಕೆ ಸಂಬಂಧಿಸಿದ ಕತೆಯಿದೆ; ಈ ಸಿನಿಮಾದ ಪ್ರಮುಖ ಪಾತ್ರಗಳು ಸೋಮಾರಿ ಸಲಗ ಮತ್ತು  ಸಂಶಯಾಸ್ಪದ ನಡತೆಯ ಹುಲಿಯದ್ದು; ಇವು ಪೂರಕ ವಾತಾವರಣವಿಲ್ಲದ ಸ್ಥಿತಿಯಲ್ಲಿ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳಲು, ತಮ್ಮ ಪ್ರಭೇದಗಳ ವ್ಯತ್ಯಾಸಗಳನ್ನು ಮರೆತು, ಒಗ್ಗೂಡಿ, ತಮ್ಮ ಜೀವನಪ್ರಯಾಣದಲ್ಲಿ ಪರಸ್ಪರ ಸಹಾಯ ಮಾಡಿಕೊಳ್ಳುತ್ತವೆ. ವಿಭಿನ್ನ ಜಾತಿಗಳಿಗೆ ಸೇರಿದ ಪ್ರಾಣಿಗಳ ನಡುವಿನ ಸ್ನೇಹದ ಅತ್ಯುತ್ತಮ ಉದಾಹರಣೆಯಿದು.

ಬೆಂಗಳೂರು
25 Apr 2018

ಶುಷ್ಕ ಹುಲ್ಲುಗಾವಲುಗಳು ಮತ್ತು ರಸಭರಿತ ಸಸ್ಯಗಳನ್ನುಳ್ಳ ಮರುಭೂಮಿಗಳು - ಇವೆಲ್ಲಾ ಒಣ ಭೂಪರಿಸರ ವ್ಯವಸ್ಥೆಗಳು ಎನಿಸಿಕೊಳ್ಳುತ್ತವೆ; ಭೂಮಿಯ ಮೇಲ್ಮೈಯ ಸುಮಾರು ೪೦% ಸ್ಥಳವನ್ನು ಇವೇ ಆವರಿಸಿಕೊಂಡಿವೆ. ಸಾಮಾನ್ಯವಾಗಿ ಇವನ್ನು ಜನರು 'ತ್ಯಾಜ್ಯಭೂಮಿಗಳು' ಎಂದು ಕಡೆಗಣಿಸಿದರೂ, ಪರಿಸರ ಸಮತೋಲನದಲ್ಲಿ ಇವು ಕೂಡ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತವೆ; ಈ ಒಣ ಭೂಪರಿಸರ ವ್ಯವಸ್ಥೆಯು ನೀರಿನ ಕೊರತೆಯಿರುವ ಪರಿಸರಕ್ಕೆ ಹೊಂದಿಕೊಳ್ಳುವ ವಿಶಿಷ್ಟ ಸಸ್ಯಗಳು ಮತ್ತು ಪ್ರಾಣಿಗಳಿಗೆ ನೆಲೆಯಾಗಿರುತ್ತವೆ. 

Bengaluru
7 Mar 2018

ಮರೆಗುಳಿತನದ ಸಾಮಾನ್ಯ ವಿಧವಾಗಿರುವ ಅಲ್ಝೈಮರ್‌ ಅನ್ನು  ಔಷಧೋಪಚಾರದ ಸಹಾಯದಿಂದ ತಕ್ಕಮಟ್ಟಿಗೆ  ನಿಯಂತ್ರಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆದಿವೆ.

Bengaluru
23 Feb 2018

ಗೆದ್ದಲು ಅಂದರೆ ಸಾಮಾನ್ಯವಾಗಿ ಎಲ್ಲರೂ ಪೀಠೋಪಕರಣ, ಬಾಗಿಲು ಕಿಟಕಿಗಳನ್ನು ಹಾಳುಗೆಡವುವ ಕೀಟ ಎಂದುಕೊಳ್ಳಬಹುದೇನೋ. ಆದರೆ, ಕೆಲವು ಬಗೆಯ ಗೆದ್ದಲುಗಳಿಗೆ ಸಿಗಬೇಕಾದ ಮೆಚ್ಚುಗೆ ಸಿಕ್ಕಿಲ್ಲ ಎಂಬುದು ಸತ್ಯ. ಏಕೆ ಗೊತ್ತೇ? ಅವು ಭೂಮಿಯ ಮೇಲಿನ ಮೊದಲ 'ರೈತರು' ಎಂಬುದು ಸಂಶೋಧನೆಯೊಂದರಿಂದ ಕಂಡುಬಂದಿದೆ; ಕೆಲವು ಬಗೆಯ ಗೆದ್ದಲುಗಳು, ತಮ್ಮದೇ ಆದ ಆಹಾರವನ್ನು ಬೆಳೆಯುತ್ತವೆಯಂತೆ! ಅವುಗಳ ತೋಟಗಳು ನಮ್ಮ ತೋಟಗಳಂತೆ ಇರುವುದಿಲ್ಲ ನಿಜ; ಆದರೆ ಆಹಾರಕ್ಕಾಗಿ ತಮ್ಮ ಗೂಡುಗಳಲ್ಲಿ ವಿವಿಧ ಬಗೆಯ ಶಿಲೀಂಧ್ರಗಳನ್ನು ಬೆಳೆಯುತ್ತವೆ. ಪ್ರತಿಯಾಗಿ, ಆ ಶಿಲೀಂಧ್ರಗಳ ಬೆಳವಣಿಗೆಗೆ ಸಹಾಯವಾಗಲೆಂದೇ ಹಲವು ಪದಾರ್ಥಗಳನ್ನು ಪೂರೈಕೆ ಮಾಡುತ್ತಾ ಪರಸ್ಪರ ಸಂಬಂಧವನ್ನು ಸುಲಲಿತಾಗಿ ನಿರ್ವಹಿಸುತ್ತವೆ.