ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

ಇತ್ತೀಚಿನ ಅಧ್ಯಯನವೊಂದರ ಭಾಗವಾಗಿ, ಕೇರಳದ ಪಶ್ಚಿಮ ಘಟ್ಟಗಳಲ್ಲಿ ಮತ್ತೊಂದು ಹೊಸ ಪ್ರಭೇದದ ಕಪ್ಪೆಯನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ‘ಮೈಕ್ರೊಹೈಲಾ ಡಾರ್ರೆಲಿ’ ಎಂಬ ಹೆಸರಿನ ಈ ಕಪ್ಪೆ, ‘ಮೈಕ್ರೊಹೈಲಾ’ ಕುಲಕ್ಕೆ ಸೇರಿದ ಜೀವಿಯಾಗಿದೆ; ಈ ಕುಲದ ಕಪ್ಪೆಗಳಿಗೆ ‘ಕಿರಿ ಮೂತಿಯ ಕಪ್ಪೆ’ (ನ್ಯಾರೋ ಮೌಥ್ಡ್ ಫ್ರಾಗ್) ಎಂಬ ಸಾಮಾನ್ಯ ಹೆಸರಿದ್ದು, ಇದಕ್ಕೆ ಕಾರಣ ಅವುಗಳ ತ್ರಿಕೋನಾಕಾರದ ಪುಟ್ಟ ದೇಹ ಮತ್ತು  ಕಿರಿದಾದ ಮೂತಿ.  ಈ ಕುಲದ ಕಪ್ಪೆಗಳು ಜಪಾನ್, ಚೀನಾ, ಭಾರತ, ಶ್ರೀಲಂಕಾ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

Read time: 1 min

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.

Read time: 1 min

ಕರ್ನಾಟಕದ ದಕ್ಷಿಣದಲ್ಲಿರುವ, ಐತಿಹಾಸಿಕವಾಗಿ ಬಂಟ್ವಾಳ ನದಿ ಎಂದು ಕರೆಯಲ್ಪಡುವ ನೇತ್ರಾವತಿ ನದಿಯ ಪ್ರವಾಹವು, ನೈರುತ್ಯ ಮಾನ್ಸೂನ್ ಸಮಯದಲ್ಲಿ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ. ಬಂಟ್ವಾಳ ಪಟ್ಟಣದ ಸ್ಥಳೀಯ ನಿವಾಸಿಗಳು ಇನ್ನೂ 1974 ರಲ್ಲಿ ನದಿಯ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಉಂಟಾದ ವಿನಾಶಕಾರಿ ಪ್ರವಾಹದಿಂದ ಹೊರಬಂದು ಪುನಃ ಬದುಕು ಕಟ್ಟಿಕೊಳ್ಳುತ್ತಿರುವಾಗಲೇ ಮತ್ತೆ ಇದು ಇತ್ತೀಚೆಗೆ 2013 ಮತ್ತು 2015 ರಲ್ಲಿ ಹಾಗೂ 2018 ರಲ್ಲಿ ಪುನರಪ್ಪಳಿಸಿದೆ. ನದಿಯ ನೀರಿನ ಮಟ್ಟದಲ್ಲಿ ಉಂಟಾಗುತ್ತಿರುವ ಎಲ್ಲಾ ಬದಲಾವಣೆಗಳಿಗೆ ಮಳೆ ಸುರಿತದ ಏರಿಳಿತಗಳು ಕಾರಣವೇ?

Read time: 1 min

ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು. ಇಂತಹ ಅನೇಕ ಸಂದರ್ಭಗಳು, ಸನ್ನಿವೇಶಗಳು, ಭಾರತದಲ್ಲಿ ನದಿಗಳ ಮಹತ್ವ ಏನೆಂಬುದನ್ನು ತೋರಿಸಿಕೊಟ್ಟಿವೆ. ನದಿಗಳು ನಮ್ಮ ದೇಶದೊಂದಿಗೆ ಕೇವಲ ನೈಸರ್ಗಿಕವಾದ ಸಂಬಂಧವನ್ನು ಹೊಂದಿಲ್ಲ; ನಾಡಿನ ಜನರ ನಾಡಿಮಿಡಿತದೊಂದಿಗೆ ಭಾವನಾತ್ಮಕವಾದ ಸಂಬಂಧವನ್ನೂ ಹೊಂದಿವೆ.

Read time: 1 min

ಮನೆಮನೆಗಳಲ್ಲಿ ಮುದ್ದು ನಾಯಿಮರಿಗಳನ್ನು ಸಾಕುವುದು ಇಂದು ನಿನ್ನೆಯಿಂದ ಪ್ರಾರಂಭವಾದದ್ದಲ್ಲ; ಮಾನವ, ಅಲೆಮಾರಿ ಜೀವನಕ್ಕೆ ಬೆನ್ನುಮಾಡಿ, ಒಂದೆಡೆ ವಾಸ್ತವ್ಯ ಹೂಡುವುದನ್ನು ಕಲಿಯುವುದಕ್ಕೆ ಮುನ್ನವೂ, ಅವನೊಂದಿಗೆ ಹೋದಲ್ಲೆಲ್ಲಾ ಹಿಂಬಾಲಿಸಿಕೊಂಡು ಹೋಗುತ್ತಿದ್ದು, ವಾಸ್ತವ್ಯ ಹೂಡುತ್ತಿದ್ದಂತೆ ತಾನೂ ಅಲ್ಲೇ ಮೊಕ್ಕಾಂ ಹೂಡಿದ ಮೊದಲ ಪ್ರಾಣಿಗಳಲ್ಲಿ ನಾಯಿಯೂ ಒಂದು! ಆದರೆ, ಸಾಕುಪ್ರಾಣಿಯಾಗಿರಬೇಕಾದ ನಾಯಿಗಳು ಹಲವಾರು ಕಾರಣಗಳಿಂದ ಬೀದಿಯ ಪಾಲಾಗುತ್ತಿರುವುದು ವಿಪರ್ಯಾಸ ಹಾಗೂ ಹಲವು ಸಮಸ್ಯೆಗಳ ಮೂಲವೂ ಹೌದು.

Read time: 1 min

ಯುನೈಟೆಡ್ ಕಿಂಗ್ಡಮ್ನ ಪ್ಲೈಮೌತ್ ವಿಶ್ವವಿದ್ಯಾಲಯ, ಅಮೇರಿಕಾದ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯ,  ಲಂಡನ್ ನ ಇಂಪೀರಿಯಲ್ ಕಾಲೇಜ್ ಮತ್ತು ಭಾರತದ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಪಶ್ಚಿಮ ಘಟ್ಟಗಳ ಉತ್ತರ ಭಾಗದಲ್ಲಿನ ಬಂಡೆಗಳಿಂದಾವೃತವಾದ ಪ್ರಸ್ಥಭೂಮಿಗಳಲ್ಲಿ ‘ಬ್ಯಾಟ್ರಾಕೊಖೈಟ್ರಿಯಮ್ ಡೆಂಡ್ರೊಬಾಟಿಡಿಸ್’ನ ಪ್ರಭುತ್ವವನ್ನು ಶೋಧಿಸಿದ್ದಾರೆ. 

Read time: 1 min

'ಸೈನ್ಸ್' ನಿಯತಕಾಲಿಕೆಯಲ್ಲಿ ಪ್ರಕಟವಾದ ಲೇಖನವೊಂದರಲ್ಲಿ, ಜೀವವೈವಿಧ್ಯತೆಯ ಒಡಂಬಡಿಕೆಯೇ ಜೀವವೈವಿಧ್ಯತೆಯ ಸಂಶೋಧನೆಗಳ ಮೇಲೆ ಮಿತಿ ಹೇರುವುದನ್ನು ಪ್ರಶ್ನಿಸಿ, ಬೇಲಿಯೇ ಎದ್ದು ಹೊಲ ಮೇದಂತಾಯ್ತು ಎಂದು ಟೀಕಿಸಲಾಗಿದೆ. 

Read time: 1 min

ಇತ್ತೀಚೆಗೆ ಭಾರತದೊಳಗೆ ಆಲಿವ್ ರಿಡ್ಲೆ ಆಮೆಗಳ ಮರುಪ್ರವೇಶವು, ವಲಸೆ ಬಂದ ಪ್ರಾಣಿಗಳಿಗೆ ಭಾರತೀಯ ಕರಾವಳಿಗಳು ಅಚ್ಚುಮೆಚ್ಚಿನ ತಾಣ ಎಂಬುದನ್ನು ತೋರಿಸಿಕೊಟ್ಟಿದೆ. ಭಾರತದ ೭೫೦೦ ಕಿಲೋಮೀಟರ್ ಉದ್ದದ ಅತಿದೊಡ್ಡ ಕರಾವಳಿಯು, ವಿವಿಧ ಸಸ್ಯ ಮತ್ತು ಪ್ರಾಣಿಗಳ ನೆಲೆಯಾಗಿದೆ; ದೇಶದ ಒಟ್ಟು ಜನಸಂಖ್ಯೆಯ ಸುಮಾರು ೪೦% ಜನರು, ಇದೇ ಕರಾವಳಿಯುದ್ದಕ್ಕೂ ವಾಸಿಸುತ್ತಿದ್ದಾರೆ. ಕರಾವಳಿಯುದ್ದಕ್ಕೂ ನಡೆಯುವ ಅಭಿವೃದ್ಧಿ ಚಟುವಟಿಕೆಗಳು, ಕರಾವಳಿಯ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ.

Read time: 1 min

ಹೆನ್ರಿ ಸುವಿಲ್ಲನ್ ಥಾಮಸ್ 1873 ರಲ್ಲಿ ಪ್ರಕಟವಾದ ತಮ್ಮ ‘ಎ ರಾಡ್ ಇನ್ ಇಂಡಿಯಾ’ ಎಂಬ ಪುಸ್ತಕದಲ್ಲಿ ಭಾರತೀಯ ಕ್ರೀಡಾ ಮೀನುಗಾರಿಕೆಯ ಹಲವು ಆಯಾಮಗಳನ್ನು, ಅದರ ತಂತ್ರೋಪಾಯಗಳನ್ನು ಉಲ್ಲೇಖಿಸುತ್ತಾರೆ. ಈ ಪುಸ್ತಕದಲ್ಲಿ ಮೋಜಿನ ಆಟಕ್ಕಾಗಿ ಬಳಸುವ ‘ಗೂನು ಬೆನ್ನಿನ ಮಹಶೀರ್ (ಸಿಹಿ ನೀರಿನ)’ ಮೀನಿನ ಬಗ್ಗೆ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ. ಈ ಮೀನು ಸುಮಾರು 1.5 ಮೀಟರ್ ಉದ್ದ ಹಾಗೂ 55 ಕಿಲೊ ಗ್ರಾಮ್ ತೂಕದಷ್ಟು ದೈತ್ಯಾಕಾರವಾಗಿ ಬೆಳೆಯಬಹುದು. ದಕ್ಷಿಣ ಭಾರತದ ದೇಶೀಯ ಮೀನಾಗಿರುವ ಇದು, ಜಗತ್ತಿನ ಎಲ್ಲಾ ಮೀನುಗಾರರಿಗೂ ‘ದೈತ್ಯ, ಕಠಿಣ ಹೋರಾಟ ಮನೋಭಾವದ ಹಾಗೂ ಅತ್ಯಂತ ಪ್ರಮುಖ ಆಟದ ಮೀನು’ ಎಂದೇ ಪರಿಚಿತ. ಆದರೆ ವಿಪರ್ಯಾಸದ ಸಂಗತಿಯೇನು ಗೊತ್ತೇ?

Read time: 1 min

ಬೆಂಗಳೂರಿನ ರಾಮನ್ ರಿಸರ್ಚ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳು ರಷ್ಯಾ ದೇಶದ, ಮಾಸ್ಕೋದ ಲೆಬೆಡೆವ್ ಫಿಸಿಕಲ್ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳ ಜೊತೆಗೂಡಿ ಈ ರಹಸ್ಯಗಳ ಬುಟ್ಟಿಗೆ ಹೊಸದೊಂದು ವಿಸ್ಮಯಕಾರಿ ದ್ರವ್ಯವನ್ನು ತುಂಬಿದ್ದಾರೆ. 

Read time: 1 min