ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Engineering

ಮುಂಬೈ
22 Jun 2022

ಕಾಂಕ್ರೀಟ್‌ನಲ್ಲಿ ಹುದುಗಿರುವ ರೆಬಾರ್‌ಗಳಲ್ಲಿನ ತುಕ್ಕು ಪ್ರಮಾಣವನ್ನು ಮಾಪಿಸಲು ವಿಜ್ಞಾನಿಗಳು ಒಂದು ಹೊಸ ತಪಾಸಕವನ್ನು ಅಭಿವೃದ್ಧಿಪಡಿಸಿದ್ದಾರೆ.

ಬೆಂಗಳೂರು
6 Apr 2022

ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು 

ಮುಂಬೈ
9 Mar 2022

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

ಮುಂಬೈ
2 Mar 2022

ಸ್ಥಳ ಆಧಾರಿತ ಸೇವೆಗಳು ಪ್ರತಿಯೊಬ್ಬರ ಜೀವನದ ಅತ್ಯಗತ್ಯ ಭಾಗವಾಗಿದೆ. ವಿಶೇಷವಾಗಿ ಸ್ಮಾರ್ಟ್ ಫೋನ್‌ ಮೂಲಕ ಬಳಸುವ ಗೂಗಲ್ ಮ್ಯಾಪ್ಸ್, ಓಲಾ, ಉಬರ್ ನಂತಹ ಆಪ್ ಗಳು ಇಂತಹ ಸ್ಥಳ ಆಧಾರಿತ ಸೇವೆಯ ಮೇಲೆ ಅವಲಂಬಿತವಿವಾಗಿದೆ. ಈ ಸೇವೆಯನ್ನು ಕಲ್ಪಿಸುವುದಕ್ಕೆ ಪೂರಕವಾದ ಅಂಶವೆಂದರೆ ಅಮೇರಿಕಾ ದೇಶಕ್ಕೆ ಸೇರಿದ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್), ರಷ್ಯಾದ ಗ್ಲೊನಾಸ್ (GLONAS), ಅಥವಾ ಯುರೋಪ್ ನ ಗೆಲಿಲಿಯೋ (Galileo) ಎಂಬ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ.

ಬೆಂಗಳೂರು
22 Apr 2020

ಹವಾಮಾನ ವೈಪರೀತ್ಯದಿಂದ ಉಂಟಾಗುವ ಅನೇಕ ವಿಪತ್ತುಗಳ ಪೈಕಿ, ಮಣ್ಣಿನ ಲವಣಾಂಶದ ಹೆಚ್ಚಳವೂ ಒಂದು. 2050 ರ ಹೊತ್ತಿಗೆ, ಪ್ರಪಂಚದಾದ್ಯಂತ ಲಭ್ಯವಿರುವ ಇಂದಿನ ಕೃಷಿಯೋಗ್ಯ ಭೂಮಿಯ ಅರ್ಧದಷ್ಟು ಭಾಗವು ಲವಣಾಂಶದ ಏರುಪೇರಿನಿಂದ ಪ್ರಭಾವಿತವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಈ ಲವಣಾಂಶದ ಹೆಚ್ಚಳವು, ಭಾರತದ ಭತ್ತದ ಬಟ್ಟಲೆಂದೇ ಪ್ರಸಿದ್ಧವಾಗಿರುವ ಸಿಂಧೂ - ಗಂಗಾ ನದಿಗಳ ಒಡಲಿನ ಬಯಲು ಪ್ರದೇಶಕ್ಕೂ ಅಪಾರವಾದ ಹಾನಿ ಮಾಡಲಿದ್ದು, ಬೆಳೆ ಇಳುವರಿಯಲ್ಲಿ ಸುಮಾರು 45% ನಷ್ಟವನ್ನು ನಿರೀಕ್ಷಿಸಬಹುದಾಗಿದೆ. ಲವಣಾಂಶವು ಹೆಚ್ಚಾದಾಗ, ಸಸ್ಯಗಳು ಕಡಿಮೆ ನೀರನ್ನು ಹೀರಿಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತವೆ; ಅದು ಅವುಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ.

ಬೆಂಗಳೂರು
14 Feb 2020

ಭೂಮಿಯ ಮೇಲೆ ಪರಮಾಣು ಶಸ್ತ್ರಾಸ್ತ್ರಗಳ ದುರ್ಬಳಕೆ ಅತ್ಯಂತ ವಿನಾಶಕಾರಿಯಾಗಿದ್ದು ಅವುಗಳು  ಸ್ಫೋಟಗೊಂಡ ಸ್ಥಳದ ಸುತ್ತಮುತ್ತ 3 ಕಿಲೊಮೀಟರ್ ವ್ಯಾಪ್ತಿಯೊಳಗಿರುವ ಎಲ್ಲವನ್ನೂ ಸುಟ್ಟು ಭಸ್ಮ ಮಾಡುವಂತ ಶಕ್ತಿಯನ್ನು ಹೊಂದಿವೆ. ಈ ಕ್ರಿಯೆಯಲ್ಲಿ ಬಿಡುಗಡೆಯಾಗುವ ಅಯಾನೀಕರಿಸುವ ವಿಕಿರಣಗಳು ನಿರ್ದಿಷ್ಟ  ಪ್ರದೇಶವನ್ನು ಹಾನಿಗೊಳಿಸುವ ಶಕ್ತಿಯನ್ನು ಹೊಂದಿದ್ದು, ದೀರ್ಘಾವಧಿಯಲ್ಲಿ ಆ ಪ್ರದೇಶವು ಬಾಧಿತಗೊಳ್ಳುವಂತೆ ಮಾಡುತ್ತವೆ ಅಲ್ಲದೇ ಆ ಇಡೀ ಪ್ರದೇಶವನ್ನು ವಾಸಕ್ಕೆ ಯೋಗ್ಯವಲ್ಲದಂತೆ ಮಾಡುತ್ತವೆ- ಎರಡನೇ ವಿಶ್ವ ಯುದ್ದದ ಸಂದರ್ಭದಲ್ಲಿ ಹಿರೋಶಿಮಾ ಮತ್ತು ನಾಗಸಾಕಿಯ ಮೇಲೆ ನಡೆದ ದುರಂತ ಬಾಂಬ್ ಸ್ಫೋಟಗಳ ರೀತಿಯಲ್ಲಿಯೇ- ಆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುತ್ತದೆ.

ಬೆಂಗಳೂರು
17 Jul 2019

ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.

ಮುಂಬಾಯಿ
30 Aug 2018

ಇತ್ತೀಚೆಗೆ ಭಾರತದೊಳಗೆ ಆಲಿವ್ ರಿಡ್ಲೆ ಆಮೆಗಳ ಮರುಪ್ರವೇಶವು, ವಲಸೆ ಬಂದ ಪ್ರಾಣಿಗಳಿಗೆ ಭಾರತೀಯ ಕರಾವಳಿಗಳು ಅಚ್ಚುಮೆಚ್ಚಿನ ತಾಣ ಎಂಬುದನ್ನು ತೋರಿಸಿಕೊಟ್ಟಿದೆ. ಭಾರತದ ೭೫೦೦ ಕಿಲೋಮೀಟರ್ ಉದ್ದದ ಅತಿದೊಡ್ಡ ಕರಾವಳಿಯು, ವಿವಿಧ ಸಸ್ಯ ಮತ್ತು ಪ್ರಾಣಿಗಳ ನೆಲೆಯಾಗಿದೆ; ದೇಶದ ಒಟ್ಟು ಜನಸಂಖ್ಯೆಯ ಸುಮಾರು ೪೦% ಜನರು, ಇದೇ ಕರಾವಳಿಯುದ್ದಕ್ಕೂ ವಾಸಿಸುತ್ತಿದ್ದಾರೆ. ಕರಾವಳಿಯುದ್ದಕ್ಕೂ ನಡೆಯುವ ಅಭಿವೃದ್ಧಿ ಚಟುವಟಿಕೆಗಳು, ಕರಾವಳಿಯ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ.

Bengaluru
3 Jan 2019

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.