Novel scheme by IIT Bombay researchers to control drones can enable complex formation flying using only camera data, without GPS or inter-drone communication.

General

ಬೆಂಗಳೂರು

ವೈವಿಧ್ಯತೆಯಲ್ಲಿ ಶ್ರೀಮಂತವೆನಿಸಿದ ತಾಣವಾದ ಭಾರತದಲ್ಲಿ ಹಲವಾರು ಬಗೆಯ ಸಂಸ್ಕೃತಿಗಳನ್ನು ನಾವು ಕಾಣಬಹುದು. ಇಲ್ಲಿ ಮಾತನಾಡಲಾಗುವ ಹೆಚ್ಚಿನ ಸಂಖ್ಯೆಯ ಭಾಷೆಗಳೇ ಇದಕ್ಕೆ ಒಂದು ಪ್ರಮಾಣಪತ್ರವಾಗಿದೆ. ಈ ಭಾಷೆಗಳನ್ನು ಕಲಿಯುವುದು ಆಸಕ್ತಿಕರವೇನೋ ಹೌದು; ಜೊತೆಗೇ, ಅವುಗಳನ್ನು ಅಧ್ಯಯನ ಮಾಡುವುದು ಇನ್ನೊಂದು ಕಾರಣಕ್ಕಾಗಿ ಆಕರ್ಷಕವಾಗಿದೆ; ಅದೇನೆಂದರೆ ಭಾರತೀಯ ಆರ್ಯ ಭಾಷಿಕರು ಕ್ರಿಸ್ತ ಪೂರ್ವ ೧೫೦೦ರಲ್ಲಿ ಆಗಮಿಸುವ ಮೊದಲು, ಭಾರತೀಯ ಉಪಖಂಡದಲ್ಲಿ ವಾಸವಾಗಿದ್ದ ದ್ರಾವಿಡರ ಅಲ್ಪ-ಪ್ರಸಿದ್ಧ ಇತಿಹಾಸವನ್ನು ಅರ್ಥಮಾಡಿಕೊಳ್ಳಲು ಈ ಭಾಷೆಗಳು ನಮಗೆ ಸಹಾಯ ಮಾಡುತ್ತವೆ. ಇಲ್ಲಿಯವರೆಗೆ, ದ್ರಾವಿಡರ ಮೂಲ ಮತ್ತು ದೇಶದಾದ್ಯಂತ ಅವರ ಪ್ರಸರಣದ ಬಗ್ಗೆ ಹೆಚ್ಚು ತಿಳಿದಿಲ್ಲ.

ಪಶ್ಚಿಮ ಘಟ್ಟಗಳು ಜೀವ ವೈವಿಧ್ಯದಿಂದ ಸಮೃದ್ಧವಾಗಿರುವ ಪರಿಸರ ವ್ಯವಸ್ಥೆ; ಅದಕ್ಕೆ ಇದನ್ನು 'ಜೀವವೈವಿಧ್ಯತೆಯ ಹಾಟ್ಸ್ಪಾಟ್' ಎಂದು ವಿಜ್ಞಾನಿಗಳು ಘೋಷಿಸುತ್ತಾರೆ. ಆದರೆ ಈ ಘೋಷಣೆಯನ್ನು ಬೆಂಬಲಿಸಲು ಪುರಾವೆ ಹೇಗೆ ಸಿಗುತ್ತದೆ ಗೊತ್ತೇ? ಅದಕ್ಕೆ ಯಾವುದೇ ಒಂದು ಪರಿಸರ ವ್ಯವಸ್ಥೆಯಲ್ಲಿ ದೊರೆಯುವ ಮಾದರಿಗಳ ಸಂಗ್ರಹಣೆ ಮತ್ತು ವಿಶ್ಲೇಷಣೆಯ ಮೂಲಕ, ಜೀವವೈವಿಧ್ಯದ ಸಮೃದ್ಧಿಗೆ ಸಾಕ್ಷಿ ಒದಗಿಸುತ್ತಾರೆ.

ಹೊಸ ದೆಹಲಿ

ಪಶ್ಚಿಮಘಟ್ಟಗಳ ಕಾಡುಗಳು ಭಾರತದ ಜೀವವೈವಿಧ್ಯದ ಹಾಟ್ಸ್ಪಾಟ್ ಎಂದೇ ಹೆಸರುವಾಸಿ. ಇತ್ತೀಚಿನ ವರ್ಷಗಳಲ್ಲಿ, ಈ ಸಮೃದ್ಧ ಪರಿಸರ ವ್ಯವಸ್ಥೆಗಳಲ್ಲಿ ವಾಸಿಸುವ ಹಲವು ಹೊಸ ಜಾತಿಯ ಉಭಯವಾಸಿಗಳು ಮತ್ತು ಸರೀಸೃಪಗಳು ಪತ್ತೆಯಾಗಿವೆ. ಆದರೆ, ಈ ಬಾರಿ, ಉಭಯಚರಗಳ ಬಗ್ಗೆ ಅಧ್ಯಯನ ನಡೆಸುವ ದೆಹಲಿಯ ವಿಶ್ವವಿದ್ಯಾನಿಲಯದ ಸಂಶೋಧಕರು, ರಸ್ತೆಬದಿಯ ಕೆಸರುಗುಂಡಿಯಂತಹ ಸರಳವಾದ ಸ್ಥಳದಲ್ಲಿ ಅಡಗಿದ್ದ ಹೊಸ ಜಾತಿಯ ಕಪ್ಪೆಯನ್ನು ಕಂಡುಹಿಡಿದಿದ್ದಾರೆ! ಭಾರತ ಸರ್ಕಾರದ ‘ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ’ಯ ಕ್ರಿಟಿಕಲ್ ಇಕೋಸಿಸ್ಟಮ್ ಪಾರ್ಟ್ನರ್ಶಿಪ್ ಫಂಡ್ನಿಂದ ಮತ್ತು ದೆಹಲಿ ವಿಶ್ವವಿದ್ಯಾಲಯದಿಂದ ಅನುದಾನ ಪಡೆದ ತಮ್ಮ ಈ ಸಂಶೋಧನೆಯನ್ನು ‘ಸೈಂಟಿಫಿಕ್ ರಿಪೋರ್ಟ್ಸ್’ ಜರ್ನಲ್ನಲ್ಲಿ ಅವರು ವಿವರಿಸಿದ್ದಾರೆ.

ಬೆಂಗಳೂರು

‘ದಿ ಲಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ’ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನಗಳ ಸರಣಿಯಲ್ಲಿ, ಭಾರತ, ಯು.ಕೆ ಮತ್ತು ಆಸ್ಟ್ರೇಲಿಯಾದ ಸಂಶೋಧಕರ ತಂಡವು ಸಾಂಕ್ರಾಮಿಕವೆಂಬಂತೆ ಹೆಚ್ಚುತ್ತಿರುವ ಟೈಪ್ 2 ಮಧುಮೇಹದ ಬಗ್ಗೆ, ಅದರ ಪ್ರಚಲಿತ ಚಿಕಿತ್ಸೆಯ ಬಗ್ಗೆ, ಜೊತೆಗೆ ಬಾಂಗ್ಲಾದೇಶ, ಭೂತಾನ್, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳು ಈ ನಿಟ್ಟಿನಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಪ್ ಟು ಡೇಟ್ ಮಾಹಿತಿ ನೀಡುತ್ತದೆ.

ಬೆಂಗಳೂರು

ಯುನೈಟೆಡ್ ಕಿಂಗ್ಡಮ್ನ ಪ್ಲೈಮೌತ್ ವಿಶ್ವವಿದ್ಯಾಲಯ, ಅಮೇರಿಕಾದ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯ,  ಲಂಡನ್ ನ ಇಂಪೀರಿಯಲ್ ಕಾಲೇಜ್ ಮತ್ತು ಭಾರತದ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಪಶ್ಚಿಮ ಘಟ್ಟಗಳ ಉತ್ತರ ಭಾಗದಲ್ಲಿನ ಬಂಡೆಗಳಿಂದಾವೃತವಾದ ಪ್ರಸ್ಥಭೂಮಿಗಳಲ್ಲಿ ‘ಬ್ಯಾಟ್ರಾಕೊಖೈಟ್ರಿಯಮ್ ಡೆಂಡ್ರೊಬಾಟಿಡಿಸ್’ನ ಪ್ರಭುತ್ವವನ್ನು ಶೋಧಿಸಿದ್ದಾರೆ. 

ಮುಂಬಾಯಿ

ಕರ್ನಾಟಕದ ದಕ್ಷಿಣದಲ್ಲಿರುವ, ಐತಿಹಾಸಿಕವಾಗಿ ಬಂಟ್ವಾಳ ನದಿ ಎಂದು ಕರೆಯಲ್ಪಡುವ ನೇತ್ರಾವತಿ ನದಿಯ ಪ್ರವಾಹವು, ನೈರುತ್ಯ ಮಾನ್ಸೂನ್ ಸಮಯದಲ್ಲಿ ಕಂಡುಬರುವ ಸಾಮಾನ್ಯ ದೃಶ್ಯವಾಗಿದೆ. ಬಂಟ್ವಾಳ ಪಟ್ಟಣದ ಸ್ಥಳೀಯ ನಿವಾಸಿಗಳು ಇನ್ನೂ 1974 ರಲ್ಲಿ ನದಿಯ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಉಂಟಾದ ವಿನಾಶಕಾರಿ ಪ್ರವಾಹದಿಂದ ಹೊರಬಂದು ಪುನಃ ಬದುಕು ಕಟ್ಟಿಕೊಳ್ಳುತ್ತಿರುವಾಗಲೇ ಮತ್ತೆ ಇದು ಇತ್ತೀಚೆಗೆ 2013 ಮತ್ತು 2015 ರಲ್ಲಿ ಹಾಗೂ 2018 ರಲ್ಲಿ ಪುನರಪ್ಪಳಿಸಿದೆ. ನದಿಯ ನೀರಿನ ಮಟ್ಟದಲ್ಲಿ ಉಂಟಾಗುತ್ತಿರುವ ಎಲ್ಲಾ ಬದಲಾವಣೆಗಳಿಗೆ ಮಳೆ ಸುರಿತದ ಏರಿಳಿತಗಳು ಕಾರಣವೇ?

ಬೆಂಗಳೂರು

ಬೆಂಗಳೂರಿನ ಅಶೋಕ ಟ್ರಸ್ಟ್ನ ಡಾ. ರವಿಕಾಂತ್ ಮತ್ತು ಅವರ ಸಹೋದ್ಯೋಗಿಗಳು ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗದಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ, ಗಾರ್ಸಿನಿಯಾ ಅಥವಾ ಪುನರ್ಪುಳಿ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸುವ ಪೂರಕ ಆಹಾರಗಳಲ್ಲಿ ಕಲಬೆರಕೆಯಿರುವ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿದ್ದಾರೆ.

ಬೆಂಗಳೂರು

ಒಮ್ಮೆ ಕಲ್ಪಿಸಿಕೊಳ್ಳಿ. ಆ ಮೋಡ ಕವಿದ ಮುಸ್ಸಂಜೆ. ಮೇಘ ತುಂಬಿದ ಬಾನು. ಆ ಬಾನಿನಿಂದ ನಿಧಾನವಾಗಿ ಕೆಳಗಿಳಿದು ಭೂಮಿಯನ್ನು ತಾಕಿದ ಮಳೆಹನಿಗಳು. ಈ ಮಳೆಹನಿಗಳ ಸ್ಪರ್ಷದಿಂದ ಹಸಿಯಾದ ಭೂಮಿಯ ಮಣ್ಣು. ಮಣ್ಣಿನಿಂದ ಹೊರಸೂಸುವ ಆ ಭೂಮಿಯ ಸುಗಂಧ. ಎಂತಹ ಅದ್ಭುತ ಅನುಭವವಲ್ಲವೆ? ಈ ಹೊಸ-ಮಳೆಹನಿಯ ಹಸಿಯಾದ ಭೂಮಿಯ ಸುವಾಸನೆ ನಿಮಗೆ ಎಂದಾದರೂ ಅದನ್ನು ತಿನ್ನಬೇಕೆನ್ನುವ ಪ್ರಚೋದನೆಯನ್ನು ನೀಡಿದೆಯೆ? ಗಾಬರಿ ಪಡಬೇಡಿ, ಅನೇಕ ಸಸ್ತನಿಗಳಲ್ಲಿ ಇದು ಸಾಮಾನ್ಯ. 

ಬೆಂಗಳೂರು

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೀಕಾಂತ್ ದೇವಧರ್ ಮತ್ತು ಕವಿತಾ ಈಶ್ವರನ್ ರವರು, ಅತ್ಯಂತ ಆಕರ್ಷಕವಾದ ಪುರುಷ ಅಗಾಮಗಳು (ಹಲ್ಲಿಗಳು) ಪ್ರದರ್ಶಿಸುವ ವಿವಿಧ ವರ್ತನೆಯ ಸಂಕೇತಗಳ ಅರ್ಥವನ್ನು ಡಿಕೋಡ್ ಮಾಡಲು ತಮ್ಮ ಹೊಸ ಅಧ್ಯಯನದಲ್ಲಿ ಪ್ರಯತ್ನಿಸಿದ್ದಾರೆ.

ಮುಂಬಾಯಿ

ಇತ್ತೀಚೆಗೆ ಭಾರತದೊಳಗೆ ಆಲಿವ್ ರಿಡ್ಲೆ ಆಮೆಗಳ ಮರುಪ್ರವೇಶವು, ವಲಸೆ ಬಂದ ಪ್ರಾಣಿಗಳಿಗೆ ಭಾರತೀಯ ಕರಾವಳಿಗಳು ಅಚ್ಚುಮೆಚ್ಚಿನ ತಾಣ ಎಂಬುದನ್ನು ತೋರಿಸಿಕೊಟ್ಟಿದೆ. ಭಾರತದ ೭೫೦೦ ಕಿಲೋಮೀಟರ್ ಉದ್ದದ ಅತಿದೊಡ್ಡ ಕರಾವಳಿಯು, ವಿವಿಧ ಸಸ್ಯ ಮತ್ತು ಪ್ರಾಣಿಗಳ ನೆಲೆಯಾಗಿದೆ; ದೇಶದ ಒಟ್ಟು ಜನಸಂಖ್ಯೆಯ ಸುಮಾರು ೪೦% ಜನರು, ಇದೇ ಕರಾವಳಿಯುದ್ದಕ್ಕೂ ವಾಸಿಸುತ್ತಿದ್ದಾರೆ. ಕರಾವಳಿಯುದ್ದಕ್ಕೂ ನಡೆಯುವ ಅಭಿವೃದ್ಧಿ ಚಟುವಟಿಕೆಗಳು, ಕರಾವಳಿಯ ಪರಿಸರ ವ್ಯವಸ್ಥೆಯನ್ನು ಹಾನಿಗೊಳಿಸುತ್ತವೆ.

Search Research Matters