ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Health

ಬೆಂಗಳೂರು
21 Mar 2019

‘ದಿ ಲಾನ್ಸೆಟ್ ಡಯಾಬಿಟಿಸ್ ಅಂಡ್ ಎಂಡೋಕ್ರೈನಾಲಜಿ’ ನಿಯತಕಾಲಿಕದಲ್ಲಿ ಪ್ರಕಟವಾದ ಅಧ್ಯಯನಗಳ ಸರಣಿಯಲ್ಲಿ, ಭಾರತ, ಯು.ಕೆ ಮತ್ತು ಆಸ್ಟ್ರೇಲಿಯಾದ ಸಂಶೋಧಕರ ತಂಡವು ಸಾಂಕ್ರಾಮಿಕವೆಂಬಂತೆ ಹೆಚ್ಚುತ್ತಿರುವ ಟೈಪ್ 2 ಮಧುಮೇಹದ ಬಗ್ಗೆ, ಅದರ ಪ್ರಚಲಿತ ಚಿಕಿತ್ಸೆಯ ಬಗ್ಗೆ, ಜೊತೆಗೆ ಬಾಂಗ್ಲಾದೇಶ, ಭೂತಾನ್, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ದೇಶಗಳ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳು ಈ ನಿಟ್ಟಿನಲ್ಲಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅಪ್ ಟು ಡೇಟ್ ಮಾಹಿತಿ ನೀಡುತ್ತದೆ.

ಬೆಂಗಳೂರು
15 Sep 2018

ಯುನೈಟೆಡ್ ಕಿಂಗ್ಡಮ್ನ ಪ್ಲೈಮೌತ್ ವಿಶ್ವವಿದ್ಯಾಲಯ, ಅಮೇರಿಕಾದ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯ,  ಲಂಡನ್ ನ ಇಂಪೀರಿಯಲ್ ಕಾಲೇಜ್ ಮತ್ತು ಭಾರತದ ಟಾಟಾ ಸಮಾಜ ವಿಜ್ಞಾನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಪಶ್ಚಿಮ ಘಟ್ಟಗಳ ಉತ್ತರ ಭಾಗದಲ್ಲಿನ ಬಂಡೆಗಳಿಂದಾವೃತವಾದ ಪ್ರಸ್ಥಭೂಮಿಗಳಲ್ಲಿ ‘ಬ್ಯಾಟ್ರಾಕೊಖೈಟ್ರಿಯಮ್ ಡೆಂಡ್ರೊಬಾಟಿಡಿಸ್’ನ ಪ್ರಭುತ್ವವನ್ನು ಶೋಧಿಸಿದ್ದಾರೆ. 

ಬೆಂಗಳೂರು
13 Mar 2019

ಬೆಂಗಳೂರಿನ ಅಶೋಕ ಟ್ರಸ್ಟ್ನ ಡಾ. ರವಿಕಾಂತ್ ಮತ್ತು ಅವರ ಸಹೋದ್ಯೋಗಿಗಳು ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗದಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ, ಗಾರ್ಸಿನಿಯಾ ಅಥವಾ ಪುನರ್ಪುಳಿ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸುವ ಪೂರಕ ಆಹಾರಗಳಲ್ಲಿ ಕಲಬೆರಕೆಯಿರುವ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿದ್ದಾರೆ.

Bengaluru
3 Jan 2019

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.

ಮುಂಬೈ
18 Apr 2018

ಭಾರತೀಯ ತಂತ್ರಜ್ಞಾನ ಸಂಸ್ಥೆ ಬಾಂಬೆಯ (ಐಐಟಿ ಬಾಂಬೆ) ಪ್ರಾಧ್ಯಾಪಕರಾದ ಪ್ರೊ. ಅಮಿತ್ ಅರೋರಾ ಮತ್ತು ಸಂಗಡಿಗರು ದಾಳಿಂಬೆ ಬೀಜದಿಂದ ಎಣ್ಣೆಯನ್ನು ತೆಗೆಯುವ ನವೀನ ವಿಧಾನವನ್ನು ಪ್ರಸ್ಥಾಪಿಸಿದ್ದಾರೆ. ಈ ವಿಧಾನವು ಅತ್ಯoತ ಅಗ್ಗವಾಗಿಯೂ, ತ್ಯಾಜ್ಯ ರಹಿತವಾಗಿಯೂ ಇದ್ದು ಅತೀ ಹೆಚ್ಚು ಗುಣಮಟ್ಟದ ಪ್ರೋಟೀನ್ (ಸಸಾರಜನಕ ಆಹಾರ ಪದಾರ್ಥ) ಮತ್ತು ನಾರಿನ ಅಂಶ ನೀಡಬಲ್ಲದು.

17 Mar 2018

ನಮ್ಮ ಸುತ್ತಮುತ್ತ ಮಧುಮೇಹಿಗಳನ್ನು, ಅದರಲ್ಲೂ, ಇನ್ಸುಲಿನ್ ಚುಚ್ಚುಮದ್ದು ತೆಗೆದುಕೊಳ್ಳುವ ಮಧುಮೇಹಿಗಳನ್ನು ಕಂಡಿರುತ್ತೇವೆ. ಕ್ರಿಕೆಟಿಗ ವಾಸಿಮ್ ಅಕ್ರಮ್ ಬ್ಯಾಟ್ಸಮನ್ ಅನ್ನು ಬೆದರಿಸುವಷ್ಟು ವೇಗದ ಚೆಂಡು ಎಸೆಯುವ ಬೌಲರ್, ಜೊತೆಗೇ, ಇನ್ಸುಲಿನ್ ಅವಲಂಬಿತ ಮಧುಮೇಹಿ ಕೂಡ. 

ಬೆಂಗಳೂರು
15 Jun 2018

ಪ್ರತಿಜೀವಕಗಳು 'ಸೂಪರ್ ಬಗ್' ಸರಣಿಯಲ್ಲಿ ಇದು ಕೊನೆಯ ಭಾಗ. ಇದರಲ್ಲಿ ರೋಗಗಳನ್ನು ಉಂಟುಮಾಡುವ ಬ್ಯಾಕ್ಟೇರಿಯಾಗಳಲ್ಲಿ ಪ್ರತಿಜೀವಕ ನಿರೋಧಕತೆ ಹೇಗೆ ಕಂಡುಬರುತ್ತದೆ, ಅದಕ್ಕೆ ಕಾರಣಗಳು ಮತ್ತು ಅದರಿಂದ ಉಂಟಾಗಬಹುದಾದ ತೀವ್ರತೆಯ ಬಗ್ಗೆ ತಿಳಿಯಬಹುದು. 

ಬೆಂಗಳೂರು
8 Jun 2018

ಈ ಲೇಖನ ಸರಣಿಯಲ್ಲಿ 'ದುರುಪಯೋಗಪಡಿಸಿಕೊಳ್ಳಲಾದ' ಪ್ರತಿಜೀವಕಗಳು 'ಸೂಪರ್ ಬಗ್'ಗಳಿಗೆ ಹೇಗೆ ಸಹಾಯ ಮಾಡುತ್ತಿವೆ ಮತ್ತು ನಾವೇಕೆ ಪ್ರತಿಜೀವಕಗಳನ್ನು ದುರುಪಯೋಗ ಪಡಿಸಿಕೊಂಡಿದ್ದೇವೆ ಎಂಬುದರ ಬಗ್ಗೆ ವಿವರಗಳನ್ನು ನೀಡುತ್ತೇವೆ.

ಬೆಂಗಳೂರು
1 Jun 2018

ಸೂಪರ್ ಬಗ್ ಸರಣಿ - ಭಾಗ ೧

ಬ್ಯಾಕ್ಟೀರಿಯಾದಿಂದ ಉಂಟಾಗುವ ಪ್ರತಿಜೀವಕ ನಿರೋಧಕತೆಯ ಬಗ್ಗೆ ಮೂರು ಭಾಗಗಳಲ್ಲಿ ಮೂಡಲಿದೆ. ಮೊದಲ ಭಾಗದಲ್ಲಿ ಅದರ ಕಾರಣಗಳು, ಪ್ರತಿಜೀವಕ ನಿರೋಧಕತೆಯಿಂದ ಉಂಟಾಗುವ ತೊಂದರೆಗಳು ಹಾಗು ಭಾರತದಲ್ಲಿ ಈ ಸಮಸ್ಯೆಯ ತೀವ್ರತೆಯ ಬಗ್ಗೆ ತಿಳಿಯಬಹುದು.

ಬೆಂಗಳೂರು
30 Apr 2018

ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ. ದಿನೇದಿನೇ ಹೆಚ್ಚುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸುವ ಮಾರ್ಗವೆಂದರೆ, ಸರ್ಕಾರದ ಬೆಂಬಲದೊಂದಿಗೆ ಬಲವಾದ ಆರೋಗ್ಯ ಸೇವೆ ವ್ಯವಸ್ಥೆಯನ್ನು ನಿರ್ಮಿಸುವುದು ಮತ್ತು ಅದರ ಮುಖಾಂತರ, ಇಂತಹ ಖಾಯಿಲೆಗಳಿಗೆ ಔಷಧಿಗಳನ್ನು ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಲಭ್ಯವಿರುವಂತೆ ಮಾಡುವುದು.