ಆಹಾರ ಅಭದ್ರತೆ ಭಾರತ ದೇಶಕ್ಕೆ ಅಪರಿಚಿತವೇನಲ್ಲ - ನಮ್ಮ ದೇಶದಲ್ಲಿ ಮೂರರಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತದೆ. ಮುಂಬೈನ ಅಂತರರಾಷ್ಟ್ರೀಯ ಜನಸಂಖ್ಯಾ ವಿಜ್ಞಾನ ಸಂಸ್ಥೆ (International Institute for Population Sciences) 2015 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಐದು ವರ್ಷಕ್ಕಿಂತ ಕೆಳಗಿನ 50 ಪ್ರತಿಶತ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಾರೆಂದು ತಿಳಿದುಬಂದಿದೆ. ಆರೋಗ್ಯ ಹಾಗೂ ಕೃಷಿ ವಿಭಾಗಗಳಲ್ಲಿ ತ್ವರಿತ ಅಭಿವೃದ್ಧಿಯಾಗಿದ್ದರೂ ಸಹ, ಭಾರತದ ಬಹುತೇಕ ಜನತೆ ಭಾರಿ ಅಪೌಷ್ಟಿಕತೆಯಿಂದ ನರಳುತ್ತಿದೆ. ಇದಕ್ಕೆ ಬಡತನ, ಅನಕ್ಷರತೆ, ನಿರುದ್ಯೋಗ ಮೊದಲಾದ ಸಾಮಾಜಿಕ-ಆರ್ಥಿಕ ವಿಷಯಗಳು ಪ್ರಮುಖ ಕಾರಣಗಳು.