ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Science

Bengaluru
11 Aug 2021

ಹೆಸರಿಗೆ ತಕ್ಕಂತೆ ಕಾಸ್ಮಿಕ್ ಕಿರಣಗಳು ಅಮೋಘವಾದ ಕಿರಣಗಳು. ದೂರದ ಬ್ರಹ್ಮಾಂಡದಲ್ಲಿನ ವಿಪರೀತ ಘಟನೆಗಳಿಂದ ಉತ್ಪನ್ನವಾಗುವ ಈ ಕಿರಣಗಳು ಭೂಮಿಯನ್ನು ತಲುಪುವ ಮುನ್ನ ಬೆಳಕಿನ ವೇಗದ ಸಮೀಪದ ವೇಗದಲ್ಲಿ ಬಾಹ್ಯಾಕಾಶದೊಳಗೆ ಬಹಳ ದೂರ ಸಂಚರಿಸುತ್ತವೆ. ಇವುಗಳಲ್ಲಿ ಕೆಲವು ಕಿರಣಗಳನ್ನು ಭೂಮಿಯ ವಾಯುಮಂಡಲ ಹೀರಿಕೊಳ್ಳುತ್ತದೆ, ಇನ್ನು ಹಲವು ಕಿರಣಗಳು ಭೂಮಿಯ ಮೇಲ್ಪದರದವರೆಗೆ ಚಲಿಸುತ್ತವೆ. ಈ ಕಾಸ್ಮಿಕ್ ಕಿರಣಗಳೊಳಗೆ ಏನಿದೆ, ಯಾವ ಖಗೋಳ ಘಟನೆಗಳಿಂದ ಇವು ಹುಟ್ಟುತ್ತವೆ, ಇವನ್ನೇಕೆ ನಾವು ಭೂಮಿಯ ಮೇಲೆ ಗಮನಿಸುತ್ತೇವೆ - ಈ ಪ್ರಶ್ನೆಗಳು ಕಾಸ್ಮಿಕ್ ಕಿರಣಗಳು ಆವಿಷ್ಕಾರಗೊಂಡ 1912 ನೇ ಇಸವಿಯಿಂದ ಖಗೋಳ ವಿಜ್ಞಾನಿಗಳನ್ನು ಚಕಿತಗೊಳಿಸಿವೆ.

Mumbai
5 ಮೇ 2021

ಜೂನ್ 2019 ರಲ್ಲಿ ಚೆನ್ನೈನ ಜನತೆ ಒಂದು ಭಯಾನಕ ಸಂಗತಿಯನ್ನು ಎದುರಿಸಬೇಕಾಯಿತು - ನಗರದ ಜಲಾಶಯಗಳ ಅಳವಿನ 0.1 ಪ್ರತಿಶತಕ್ಕೆ ನೀರಿನ ಮಟ್ಟ ಇಳಿದುಹೋಗಿತ್ತು. ಹಾಗೆ ನೋಡಿದರೆ ನೀರಿನ ಲಾರಿಗಳು, ಖಾಲಿ ಬಕೆಟ್ ಗಳು, ಉದ್ರಿಕ್ತ ನಾಗರೀಕರು - ಇವುಗಳನ್ನೊಳಗೊಂಡ ದೃಶ್ಯಗಳು, ಭಾರತದಲ್ಲಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಸರ್ವೇ ಸಾಮಾನ್ಯವಾಗಿದೆ.

Pune
21 Oct 2020

2019 ರಲ್ಲಿ, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಪುಣೆ (ಐಐಎಸ್ಇಆರ್ ಪುಣೆ), ರಾಷ್ಟ್ರೀಯ ಕೋಶ ವಿಜ್ಞಾನ ಕೇಂದ್ರ, ಪುಣೆ (ಎನ್‌ಸಿಸಿಎಸ್) ಮತ್ತು ಪುಣೆಯ ಪರ್ಸಿಸ್ಟೆಂಟ್ ಸಿಸ್ಟಮ್ಸ್ ಲಿಮಿಟೆಡ್, ಸಂಸ್ಥೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು (ಡಿಬಿಟಿ) ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಪ್ರಾರಂಭಿಸಿದೆ.  ಮಾನವ್ - ದಿ ಹ್ಯೂಮನ್ ಅಟ್ಲಾಸ್ ಇನಿಶಿಯೇಟಿವ್ ಎಂದು ಕರೆಯಲ್ಪಡುವ ಇದು, ದೇಶದ ಮೊದಲ ಇಂತಹ ಯೋಜನೆಯಾಗಿದೆ.

Mumbai
6 Jan 2021

ಸ್ನೆಮಾಸ್ಪಿಸ್ ರಿಷಿವ್ಯಾಲಿಯೆನ್ಸಿಸ್ (ಫೋಟೋ:ಅಕ್ಷಯ್ ಖಾಂಡೇಕರ್)

Bengaluru
7 Oct 2020

ಆಗಸ್ಟ್ ೨೦೧೯ ರಲ್ಲಿ ಚೆನ್ನೈ ಕಡಲತೀರದ ಉದ್ದಕ್ಕೂ ‘ನೋಕ್ಟಿಲುಕಾ’ ಎಂಬ ಪ್ಲ್ಯಾಂಕ್ಟನ್ (ಪ್ರವಾಹಕ್ಕೆ ವಿರುದ್ಧವಾಗಿ ಈಜಲಾಗದ ಸಣ್ಣ ಸಣ್ಣ ಸಮುದ್ರಜೀವಿಗಳು)ನ ಹರಡುವಿಕೆ ಗೋಚರಿಸಿದ್ದು, ಅವು ಕತ್ತಲಿನಲ್ಲಿ ಆಕರ್ಷಕವಾದ ನಿಯಾನ್ ನೀಲಿ ಬಣ್ಣದಲ್ಲಿ ಪ್ರಕಾಶಿಸುತ್ತಿದ್ದವು. ನೋಡುಗರನ್ನು ಮೂಕವಿಸ್ಮಿತವಾಗಿಸುವ ಈ ಸಣ್ಣ ಜೀವಿಗಳ ಜೈವಿಕದೀಪ್ತಿಯು, ಅಲೆಗಳ ಮೇಲೆ ಬೆಳಕಿನ ನೃತ್ಯದಂತೆ ಕಂಡುಬರುತ್ತದೆ, ಈ ವಿದ್ಯಮಾನದ ಸುಂದರ ಛಾಯಾ ಚಿತ್ರಗಳನ್ನು ಜನರು ಯಥೇಚ್ಚವಾಗಿ ಹಂಚಿಕೊಂಡಿದ್ದಾರೆ. ಆದರೆ, ಸಮುದ್ರವನ್ನು ಹೊಳೆಯುವಂತೆ ಮಾಡುವ ಈ ‘ಬ್ಲೂಮ್ಸ್’ ಅಥವಾ ಈ ಜೀವಿಗಳ ತ್ವರಿತ ಹರಡುವಿಕೆಯು ಅಷ್ಟೇನೂ ಸಂತೋಷ ಕೊಡುವ ವಿಷಯವಲ್ಲ.

ಬೆಂಗಳೂರು
31 Jul 2020

ಮನುಷ್ಯ ತನ್ನ ನೂರಾರು ಆಸೆಗಳನ್ನು ಪೂರೈಸಿಕೊಳ್ಳುವ ಮತ್ತು ಆಧುನಿಕ ಜೀವನಶೈಲಿಯನ್ನು ಹೊಂದುವ ಭರಾಟೆಯಲ್ಲಿ ಅರಣ್ಯಗಳು/ಕಾಡುಗಳು ನಾಶವಾಗುತ್ತಿವೆ. ಇದರಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ಇದನ್ನು ತಗ್ಗಿಸಲು ಇರುವ ಪರಿಹಾರೋಪಾಯವೆಂದರೆ  ಗಿಡಗಳನ್ನು ಬೆಳೆಸಿ ಅವನತಿಗೊಳಗಾದ ಕಾಡುಗಳನ್ನು ಮರುಸ್ಥಾಪಿಸುವುದು. ಅರಣ್ಯಗಳಲ್ಲಿನ ವೃಕ್ಷಗಳು  ಹಸಿರುಮನೆ ಅನಿಲವಾದ ಕಾರ್ಬನ್ ಡೈ ಆಕ್ಸೈಡ್ ಅನ್ನು ಹೀರಿಕೊಂಡು ತನ್ನೊಳಗೆ ಹಾಗೂ ಮಣ್ಣಿನೊಳಗೆ ಸಂಗ್ರಹಿಸಿಟ್ಟುಕೊಳ್ಳಬಲ್ಲವು, ಹಾಗಾಗಿ ಯಾವುದೇ ಒಂದು ಪ್ರದೇಶದ ನೈಸರ್ಗಿಕ ಪರಿಸರದ ಸಮತೋಲನವನ್ನು ಕಾಪಾಡುವುದರಲ್ಲಿ ಮಹತ್ವವುಳ್ಳದ್ದಾಗಿರುವ ಗಿಡ ಮರಗಳನ್ನು ಬೆಳೆಸಿ ಕಾಡುಗಳನ್ನು ಮರುಸ್ಥಾಪಿಸುವಂತಹ ತಂತ್ರವನ್ನು ಹಲವು ಕಾರ್ಯಸೂಚಿಗಳು ಬಳಸುತ್ತಿವೆ.

Dharwad
23 Sep 2020

ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಪೂರ್ವ ಘಟ್ಟದ ಕ್ರಿಕೆಟ್ ಕಪ್ಪೆಯನ್ನು ಹೋಲುವ ವಿಭಿನ್ನ ಕಪ್ಪೆಯನ್ನು ಸಂಶೋಧಕರು ಕಂಡುಹಿಡಿದಿದ್ದಾರೆ.