ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Science

ಮುಂಬೈ
18 Sep 2019

ಶಾಲೆಯಲ್ಲಿ ಕಲಿಯಬೇಕಾದರೆ ಗಣಿತದ ತರಗತಿ ನೆನಪಿದೆಯೇ? ಗಣಿತ ನಮ್ಮಲ್ಲಿ ಬಹುಪಾಲು ಜನರಿಗೆ ಕಬ್ಬಿಣದ ಕಡಲೆಯಾಗಿತ್ತಲ್ಲವೇ? ಅರ್ಧಕ್ಕಿಂತ ಸೂತ್ರಗಳನ್ನು ಸುಮ್ಮನೆ ಬಾಯಿಪಾಠ ಮಾಡಿ ಪರಿಕ್ಷೆಯಲ್ಲಿ ಬರೆಯುತ್ತಿದ್ದುದು ನೆನಪಿದೆಯೇ? ಇಂತಹ ತಲೆನೋವಿನ ಸೂತ್ರಗಳಲ್ಲಿ ಗೋಳದ ಮೇಲ್ಮೈ ವಿಸ್ತೀರ್ಣದ ಸೂತ್ರವೂ ಸಹ ನಾವು ಬಾಯಿಪಾಠ ಮಾಡಿ ಬರೆದ ಸೂತ್ರಗಳಲ್ಲಿ ಒಂದು. ಆ ಅದ್ಭುತವಾದ ಸೂತ್ರಕ್ಕೆ ನಾವು ಹೇಗೆ ಬಂದಿದ್ದೇವೆ ಎಂಬುದರ ಬಗ್ಗೆ ಯಾವುದೇ ತಿಳುವಳಿಕೆಯಿಲ್ಲದೆ ನಾವು ಅದನ್ನು ವಿವಿಧ ಸಂದರ್ಭಗಳಲ್ಲಿ ಬಳಸಿದ್ದೇವೆ.

ಬೆಂಗಳೂರು
4 Sep 2019

“ಬ್ಲಾಕ್ ಗೋಲ್ಡ್” ಅಥವಾ ಕಪ್ಪು ಚಿನ್ನವೆಂದೇ ಕರೆಯಲಾಗುವ ಮೆಣಸು, ಆರ್ಥಿಕವಾಗಿ ಬಹಳಷ್ಟು ಪ್ರಾಮುಖ್ಯತೆ ಹೊಂದಿರುತ್ತದೆ. ಅಲ್ಲದೇ, ಇದರ ಬಗ್ಗೆ ಸಂಶೋಧನೆ ನಡೆಸಲು ಸಂಶೋಧಕರಿಗೆ ಇದು ಒಂದು ಒಳ್ಳೆಯ ವಿಷಯ. ಈ ಮೆಣಸಿನ ಭೌಗೋಳಿಕ ಮೂಲವನ್ನು ಪತ್ತೆ ಮಾಡಲು ಸಂಶೋಧಕರು ತೀವ್ರವಾಗಿ ಅಧ್ಯಯನ ನಡೆಸುತ್ತಿದ್ದಾರೆ. ಭಾರತ ಹಾಗೂ ಗೋಂಡ್ವಾನ ಭೂರಾಶಿಗೆ ಐತಿಹಾಸಿಕ ಸಂಬಂಧವಿದೆಯೆಂದು ಈ ಭಾಗಗಳಿನ ಜೀವವೈವಿಧ್ಯತೆ, ಮುಖ್ಯವಾಗಿ ಪ್ರಭೇದಗಳಲ್ಲಿ ಇರುವ ಹೋಲಿಕೆಯೇ ಈ ಸಂಶೋಧನೆಗೆ ಮುಖ್ಯ ಕಾರಣ. ಅದರಲ್ಲೂ “ಪೈಪರ್” ಅಥವಾ “ಪೆಪ್ಪರ್”  ಪ್ರಭೇದಗಳು  ೬೬-೧೦೦.೫ ದಶಲಕ್ಷ ವರ್ಷಗಳ ಹಿಂದೆ ಈ ಎರಡೂ ಭೂರಾಶಿಗಳಲ್ಲಿ ಬೇರೂರಿವೆಯೆಂದು ಹೇಳಲಾಗಿದೆ.

ಬೆಂಗಳೂರು
27 Jul 2019

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರ ಒಂದು ತಂಡ ಪಶ್ಚಿಮ ಘಟ್ಟಗಳ ಹಾವುಗಳನ್ನು ಕ್ರಮಬದ್ಧವಾಗಿ ಅಧ್ಯಯನ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಕ್ರಮಬದ್ಧ ಅಧ್ಯಯನ ನಡೆಸುವಾಗ ಪಶ್ಚಿಮ ಘಟ್ಟಗಳ ಕಾಡುಗಳಿಗೆ ಸ್ವಂತವಾದ “ಪ್ರೊಹೇಟುಲ್ಲಾ ಆಂಟಿಕಾ” ಎನ್ನುವ ಒಂದು ಬಳ್ಳಿಹಾವನ್ನು ಅಕಸ್ಮಾತಾಗಿ ಕಂಡರು. ಇದು ಒಂದು ಪುರಾತನ ಪ್ರಭೇದವೆಂದು, ಸುಮಾರು ೨೬ ಮಿಲಿಯನ್ ವರುಷಗಳ ಹಿಂದೆ, ಮಧ್ಯ ಒಲಿಗೋಸೀನ್ ಯುಗದಲ್ಲಿ ವಿಕಾಸನಗೊಂಡಿತೆಂದು ಅಂದಾಜಿಸಲಾಗಿದೆ.

ಬೆಂಗಳೂರು
17 Jul 2019

ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.

ಬೆಂಗಳೂರು
19 Jun 2019

ಮಳೆಗಾಲ ಪ್ರಾರಂಭವಾಗುತ್ತಿದ್ದಂತೆಯೇ ಕಪ್ಪೆಗಳ ಸಾಮ್ರಾಜ್ಯ ಗೋಚರಿಸುತ್ತದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಮಳೆಗಾಲದಲ್ಲಿ ಎಷ್ಟೋ ಕಪ್ಪೆಗಳು ತಮ್ಮ ಸಂತಾನೋತ್ಪತ್ತಿ ಪ್ರಕ್ರಿಯೆಯತ್ತ ಮುಖ ಮಾಡುತ್ತವೆ. ಆದರೆ, ಇತ್ತೀಚೆಗಷ್ಟೇ, ಈಶಾನ್ಯ ಭಾರತದ, ಅಸ್ಸಾಂ ರಾಜ್ಯದ ಕಾಡುಗಳಲ್ಲಿ ಪತ್ತೆಯಾದ ಕಪ್ಪೆಯ ಹೊಸ ಪ್ರಭೇದವಾದ “ಮಿಕ್ರಿಲೆಟ್ಟ ಐಶಾನಿ” ಮುಂಗಾರು ಪ್ರಾರಂಭವಾಗುವ ಮುನ್ನವೇ ತನ್ನ ಸಂತಾನೋತ್ಪತ್ತಿ ಪ್ರಕ್ರಿಯೆಯನ್ನು ಪ್ರಾರಂಭಿಸಿ, ನಂತರ ಮುಂದಿನ ಮಳೆಗಾಲದವರೆಗೆ ಕಾಣಿಸಿಕೊಳ್ಳುವುದಿಲ್ಲ!

ಬೆಂಗಳೂರು
10 Jul 2019

2015ರಲ್ಲಿ, ಅದೊಂದು ಮಾಮೂಲು ಸುದಿನ. ಪುಣೆಯ ಅಘರ್ಕರ್ ಸಂಶೋಧನಾ ಕೇಂದ್ರದ, ವಿಜ್ಞಾನಿಯಾದ ಡಾ. ರಿತೇಶ್ ಕುಮಾರ್ ಚೌಧರಿಯನ್ನು ಕಾಣಲು ಬಂದಿದ್ದ, ಬೆಂಗಳೂರಿನ ಎಂ. ಈ. ಎಸ್. ವಿಜ್ಞಾನ, ವಾಣಿಜ್ಯ ಹಾಗೂ ಕಲಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ. ರಾಮಚಂದ್ರ ರಾವ್, ಉತ್ತರ ಕನ್ನಡ ಜಿಲ್ಲೆಯಿಂದ, ಚಿಕ್ಕ ಹೂಗಳಿರುವ, ಹುಲ್ಲಿನಂತೆ ಕಾಣುವ ಕೆಲ ಗಿಡಗಳ ಮಾದರಿಗಳನ್ನು ತಂದು, ಅದನ್ನು ಗುರುತಿಸಲು ಡಾ. ಚೌಧರಿಯ ಸಹಾಯ ಕೋರಿದರು. ಡಾ. ಚೌಧರಿಯವರು ಅದನ್ನು ಕೂಡಲೇ ಒಂದು ‘ಪೈಪ್ವರ್ಟ್’ ಅಥವಾ ಹೂಬಿಡುವ ಏಕದಳದ ಒಂದು ಪ್ರಭೇದ ಎಂದು ಗುರುತಿಸಿದರು. ಆದರೆ, ಇದು ಯಾವ ಪ್ರಭೇದವೆನ್ನುವುದು ಒಂದು ದೊಡ್ಡ ಯಕ್ಷ ಪ್ರಶ್ನೆಯಾಗಿತ್ತು!

ಬೆಂಗಳೂರು
4 Jan 2019

ಇತ್ತೀಚಿನ ಅಧ್ಯಯನವೊಂದರ ಭಾಗವಾಗಿ, ಕೇರಳದ ಪಶ್ಚಿಮ ಘಟ್ಟಗಳಲ್ಲಿ ಮತ್ತೊಂದು ಹೊಸ ಪ್ರಭೇದದ ಕಪ್ಪೆಯನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ. ‘ಮೈಕ್ರೊಹೈಲಾ ಡಾರ್ರೆಲಿ’ ಎಂಬ ಹೆಸರಿನ ಈ ಕಪ್ಪೆ, ‘ಮೈಕ್ರೊಹೈಲಾ’ ಕುಲಕ್ಕೆ ಸೇರಿದ ಜೀವಿಯಾಗಿದೆ; ಈ ಕುಲದ ಕಪ್ಪೆಗಳಿಗೆ ‘ಕಿರಿ ಮೂತಿಯ ಕಪ್ಪೆ’ (ನ್ಯಾರೋ ಮೌಥ್ಡ್ ಫ್ರಾಗ್) ಎಂಬ ಸಾಮಾನ್ಯ ಹೆಸರಿದ್ದು, ಇದಕ್ಕೆ ಕಾರಣ ಅವುಗಳ ತ್ರಿಕೋನಾಕಾರದ ಪುಟ್ಟ ದೇಹ ಮತ್ತು  ಕಿರಿದಾದ ಮೂತಿ.  ಈ ಕುಲದ ಕಪ್ಪೆಗಳು ಜಪಾನ್, ಚೀನಾ, ಭಾರತ, ಶ್ರೀಲಂಕಾ ಮತ್ತು ಆಗ್ನೇಯ ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುತ್ತವೆ.

ಬೆಂಗಳೂರು
29 ಮೇ 2019

ಜಾಗತಿಕವಾಗಿ, ಹುಟ್ಟಿದ ನಂತರ ಕಿವುಡುತನದ ಪರೀಕ್ಷೆಗೆ ಒಳಪಡುವ ಪ್ರತಿ 1000 ಹಸುಗೂಸುಗಳಲ್ಲಿ 6 ಮಕ್ಕಳು ಕಿವುಡುತನದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಮತ್ತು ಅವರಲ್ಲಿ  200ಕ್ಕಿಂತಲೂ ಕಡಿಮೆ ಮಕ್ಕಳಿಗೆ ಮಾತ್ರ ವಾಕ್ ಚಿಕಿತ್ಸಕರು ಲಭ್ಯವಿದ್ದಾರೆ. ಭಾರತದಂತಹ ದೇಶಗಳಲ್ಲೂ ಪರಿಸ್ಥಿತಿ ಕೆಟ್ಟದಾಗಿದ್ದು, ಬಡತನದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುತ್ತದೆ  ಮತ್ತು ಆರೋಗ್ಯ ಸೇವೆಗಳು ಅಷ್ಟು ಸುಲಭವಾಗಿ ಲಭ್ಯವಿರುವುದಿಲ್ಲ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ, ಭಾರತೀಯ ಸನ್ನಿವೇಶದಲ್ಲಿ ವಿಶೇಷವಾಗಿ ಉಪಯುಕ್ತವಾಗುವ ಒಂದು ಶ್ರವಣ ಸಾಧನವನ್ನು ರೂಪಿಸಿದ್ದಾರೆ.

ಬೆಂಗಳೂರು
15 ಮೇ 2019

ವೈದ್ಯರ ಬಳಿ ಹುಶಾರಿಲ್ಲದೆ ತೆರಳಿದಾಗ ನನಗೆ ಇಂಜೆಕ್ಷನ್ (ಚುಚ್ಚುಮದ್ದು) ಬೇಡವೇ, ಬೇಡ ಎಂದು ಹಠ ಮಾಡಿದ್ದೀರ? ನೀವು ಬೇಡವೆಂದರೂ ರೋಗಕ್ಕೆ ಚುಚ್ಚುಮದ್ದು ಅನಿವಾರ್ಯ ಎಂದು ವೈದ್ಯರು ಕಥೆ ಹೇಳಿ ನಿಮಗೆ ಚುಚ್ಚಿ ನೋವುಂಟು ಮಾಡಿದ್ದಾರಾ? ಮಿತ್ರರೆ, ನಿಮಗೊಂದು ಶುಭಸುದ್ದಿ ಕಾದಿದೆ. ‘ಹಳೆಯ ನೋವನ್ನು’ ಮರೆಯುವ ಸಲುವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ವಿಜ್ಞಾನಿಗಳು ಸೂಜಿ-ಮುಕ್ತ, ನೋವುರಹಿತ ಔಷಧಿ ವಿತರಣೆಯ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಆಶ್ಚರ್ಯವಾಗುತ್ತಿದೆಯೆ? ಈ ತಂತ್ರಜ್ಞಾನವನ್ನು ವಾಣಿಜ್ಯೀಕರಣಗೊಳಿಸಿದಲ್ಲಿ ಅತೀ ಶೀಘ್ರದಲ್ಲೆ ಔಷಧಿ ವಿತರಣೆಯಲ್ಲಿ ಬಳಸುವ ಚುಚ್ಚುಮದ್ದುಗಳನ್ನು ಬದಲಿಸಬಹುದು.