ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Science

ಬೆಂಗಳೂರು
22 Apr 2020

ಹವಾಮಾನ ವೈಪರೀತ್ಯದಿಂದ ಉಂಟಾಗುವ ಅನೇಕ ವಿಪತ್ತುಗಳ ಪೈಕಿ, ಮಣ್ಣಿನ ಲವಣಾಂಶದ ಹೆಚ್ಚಳವೂ ಒಂದು. 2050 ರ ಹೊತ್ತಿಗೆ, ಪ್ರಪಂಚದಾದ್ಯಂತ ಲಭ್ಯವಿರುವ ಇಂದಿನ ಕೃಷಿಯೋಗ್ಯ ಭೂಮಿಯ ಅರ್ಧದಷ್ಟು ಭಾಗವು ಲವಣಾಂಶದ ಏರುಪೇರಿನಿಂದ ಪ್ರಭಾವಿತವಾಗಿರುತ್ತದೆ ಎಂದು ಅಂದಾಜಿಸಲಾಗಿದೆ. ಈ ಲವಣಾಂಶದ ಹೆಚ್ಚಳವು, ಭಾರತದ ಭತ್ತದ ಬಟ್ಟಲೆಂದೇ ಪ್ರಸಿದ್ಧವಾಗಿರುವ ಸಿಂಧೂ - ಗಂಗಾ ನದಿಗಳ ಒಡಲಿನ ಬಯಲು ಪ್ರದೇಶಕ್ಕೂ ಅಪಾರವಾದ ಹಾನಿ ಮಾಡಲಿದ್ದು, ಬೆಳೆ ಇಳುವರಿಯಲ್ಲಿ ಸುಮಾರು 45% ನಷ್ಟವನ್ನು ನಿರೀಕ್ಷಿಸಬಹುದಾಗಿದೆ. ಲವಣಾಂಶವು ಹೆಚ್ಚಾದಾಗ, ಸಸ್ಯಗಳು ಕಡಿಮೆ ನೀರನ್ನು ಹೀರಿಕೊಳ್ಳುವ ಮೂಲಕ ಪ್ರತಿಕ್ರಿಯಿಸುತ್ತವೆ; ಅದು ಅವುಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ.

ಬೆಂಗಳೂರು
17 Apr 2020

ಬಾವಲಿಗಳು ತಮ್ಮ ಪಾಡಿಗೆ ತಾವು ರಾತ್ರಿಯಲ್ಲಿ ಹಾರಾಡುವ ಸಸ್ತನಿಗಳು. ಇವು ಪ್ರಪಂಚದಾದ್ಯಂತ ಹರಡಿದ್ದು, ಇವುಗಳಲ್ಲಿ ಸುಮಾರು ೧೨೦೦ ಪ್ರಭೇದಗಳಿವೆ. ಈಗಿನ ಲಾಕ್ ಡೌನ್ ಗೆ ಕಾರಣವಾಗಿರುವ ಕೋವಿಡ್-೧೯ ಸಾಂಕ್ರಾಮಿಕವನ್ನು ಬಾವಲಿಗಳು ಹರಡುತ್ತಿವೆ ಎಂದು ಜನರು ತಿಳಿದಿದ್ದಾರೆ. ಇದಕ್ಕೆ ಪೂರಕವಾಗಿ, ಕೆಲವೇ ದಿನಗಳ ಹಿಂದೆ, ICMR (ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್)ನ  ಅಧ್ಯಯನವೊಂದು ದಕ್ಷಿಣ ಭಾರತದಲ್ಲಿ ಕಂಡುಬರುವ ಬಾವಲಿಗಳಲ್ಲಿ “ಬ್ಯಾಟ್-ಕೊರೊನ ವೈರಸ್” ಇದೆ ಎಂಬುದು ಬೆಳಕಿಗೆ ಬಂದಿದೆ. ಇದನ್ನೆಲ್ಲಾ ಓದಿದ ಜನ, ಭಯಭೀತರಾಗಿ ಕೆಲವೆಡೆ ಬಾವಲಿಗಳನ್ನು ಕೊಲ್ಲುವ ನಿರ್ಧಾರ ಮಾಡಿದ್ದಾರೆ. ಕೆಲವರಂತೂ ಮನೆ ಅಂಗಳದಲ್ಲಿರುವ ಸಪೋಟಾ, ಮಾವು ಹಾಗೂ ಬಾವಲಿಗಳು ಬರುವ ಇತರ ಗಿಡ-ಮರಗಳನ್ನು ಕಡಿಯುತ್ತಿದ್ದಾರೆ.

ಬೆಂಗಳೂರು
2 Apr 2020

ವರ್ಚಸ್ವಿ ಪ್ರಾಣಿಗಳಲ್ಲಿ ಒಂದಾದ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯನ್ನು ಪ್ರಪಂಚದಾದ್ಯಂತ ಪ್ರಾಣಿಸಂರಕ್ಷಣೆಯ ಮುಖವಾಗಿ ಬಳಸಲಾಗುತ್ತಿದೆ. 2019 ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಅಂತರ್ರಾಷ್ಟ್ರೀಯ ಹುಲಿ ದಿನವಾದ ಜುಲೈ 29 ರಂದು 2018 ರ ರಾಷ್ಟ್ರೀಯ ಹುಲಿ ಗಣತಿ (ಎನ್‌ಟಿಇ) ಸಮೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದರು. ಉದ್ದೇಶಿತ ಗಡುವಿಗೆ ನಾಲ್ಕು ವರ್ಷಗಳ ಮೊದಲೇ ಭಾರತವು ತನ್ನ ಹುಲಿ ಜನಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಸಾಧಿಸಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು
26 Feb 2020

2016 ರಲ್ಲಿ, ಒಂದು ದಿನ,  ಕ್ಷೇತ್ರ ಪರಿಸರ ವಿಜ್ಞಾನಿ ವಿಘ್ನೇಶ್ ಕಾಮತ್ ಅವರು ತಮಿಳುನಾಡಿನ ಕಾಲಕ್ಕಾಡ್ ಮುಂಡಂತುರೈ ಹುಲಿ ಅಭಯಾರಣ್ಯದಲ್ಲಿ  (ಕೆಎಂಟಿಆರ್) ಕಪ್ಪೆಗಳನ್ನು ಅಧ್ಯಯನ ಮಾಡುತ್ತಿದ್ದಾಗ, ಆಕಸ್ಮಿಕವಾಗಿ ಕಾಡಿನ ಮಧ್ಯೆ ನೀಲಗಿರಿ ಲಂಗೂರಿನ (ಬುಕ್ಕ/ಮುಸುವ/ಭಾರತದಲ್ಲಿ ಸಾಮಾನ್ಯವಾಗಿ ಕಂಡು ಬರುವ ಉದ್ದನೆಯ ಬಾಲಹೊಂದಿರುವ ಕರಿಮೂತಿಯ ಕಪಿ)  ಭಾಗಶಃ ತಿನ್ನಲಾಗಿದ್ದ ಶವವನ್ನು  ಗಮನಿಸಿದರು. ಕುತೂಹಲಕಾರಿಯಾದ ಅವರು, ಈ ಕಪಿಯನ್ನು ಯಾವ ಪ್ರಾಣಿ ಈ ರೀತಿ ಭಕ್ಷಿಸಿದೆ ಎಂದು ನೋಡಬಯಸಿದರು.

ಬೆಂಗಳೂರು
19 Feb 2020

ಪಕ್ಷಿ ವೀಕ್ಷಣೆ, ಪಕ್ಷಿಗಳನ್ನು ಅವುಗಳ ನೈಸರ್ಗಿಕ ಪರಿಸರದಲ್ಲಿ ಗಮನಿಸುವ ಒಂದು ಕಲೆ. ಪಕ್ಷಿ ವೀಕ್ಷಣೆ, ಕೇವಲ ಪಕ್ಷಿಗಳನ್ನು ನೋಡುವುದಲ್ಲದೇ, ನಮ್ಮ ಆರಾಮ ವಲಯವನ್ನು ಮೀರಿ, ಅವುಗಳ ವೈವಿಧ್ಯಮಯ ಜಗತ್ತನ್ನು, ಅವುಗಳ  ವರ್ತನೆಯನ್ನು ತಾಳ್ಮೆಯಿಂದ ಗಮನಿಸುವುದು ಮತ್ತು ಕೆಲ ನಿಯಮಗಳನ್ನು ಪಾಲಿಸುವುದೂ ಒಳಗೊಂಡಿದೆ.  ಪಕ್ಷಿ ವೀಕ್ಷಣೆಯಲ್ಲಿ ವಯಸ್ಸು ಅಥವಾ ಅರ್ಹತೆಯ ನಿರ್ಬಂಧನೆಗಳಿಲ್ಲ ಹಾಗಾಗಿ ಎಲ್ಲರೂ ಆನಂದಿಸಬಹುದು. ಕೇವಲ ಅರಣ್ಯಗಳಲ್ಲದೇ, ನಮ್ಮ ಕಿಟಕಿಗಳೂ ಸಹ ಪಕ್ಷಿಗಳ ಜಗತ್ತಿನಲ್ಲಿ ಒಂದು ಇಣುಕು ನೋಟವನ್ನು ನೀಡಬಹುದು. ಸರಿಯಾದ ಮನಃಸ್ಥಿತಿಯೊಂದಿಗೆ ಕೆಲ ನಿಯಮಗಳನ್ನು ಪಾಲಿಸಿದಲ್ಲಿ ಪಕ್ಷಿ ವೀಕ್ಷಣೆ ದಿನನಿತ್ಯವೂ ಆಚರಿಸಬಲ್ಲಂತಹ ಒಂದು ಹಬ್ಬವಾಗಬಹುದು!

ಬೆಂಗಳೂರು
14 Feb 2020

ಭೂಮಿಯ ಮೇಲೆ ಪರಮಾಣು ಶಸ್ತ್ರಾಸ್ತ್ರಗಳ ದುರ್ಬಳಕೆ ಅತ್ಯಂತ ವಿನಾಶಕಾರಿಯಾಗಿದ್ದು ಅವುಗಳು  ಸ್ಫೋಟಗೊಂಡ ಸ್ಥಳದ ಸುತ್ತಮುತ್ತ 3 ಕಿಲೊಮೀಟರ್ ವ್ಯಾಪ್ತಿಯೊಳಗಿರುವ ಎಲ್ಲವನ್ನೂ ಸುಟ್ಟು ಭಸ್ಮ ಮಾಡುವಂತ ಶಕ್ತಿಯನ್ನು ಹೊಂದಿವೆ. ಈ ಕ್ರಿಯೆಯಲ್ಲಿ ಬಿಡುಗಡೆಯಾಗುವ ಅಯಾನೀಕರಿಸುವ ವಿಕಿರಣಗಳು ನಿರ್ದಿಷ್ಟ  ಪ್ರದೇಶವನ್ನು ಹಾನಿಗೊಳಿಸುವ ಶಕ್ತಿಯನ್ನು ಹೊಂದಿದ್ದು, ದೀರ್ಘಾವಧಿಯಲ್ಲಿ ಆ ಪ್ರದೇಶವು ಬಾಧಿತಗೊಳ್ಳುವಂತೆ ಮಾಡುತ್ತವೆ ಅಲ್ಲದೇ ಆ ಇಡೀ ಪ್ರದೇಶವನ್ನು ವಾಸಕ್ಕೆ ಯೋಗ್ಯವಲ್ಲದಂತೆ ಮಾಡುತ್ತವೆ- ಎರಡನೇ ವಿಶ್ವ ಯುದ್ದದ ಸಂದರ್ಭದಲ್ಲಿ ಹಿರೋಶಿಮಾ ಮತ್ತು ನಾಗಸಾಕಿಯ ಮೇಲೆ ನಡೆದ ದುರಂತ ಬಾಂಬ್ ಸ್ಫೋಟಗಳ ರೀತಿಯಲ್ಲಿಯೇ- ಆದರೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉಂಟಾಗುತ್ತದೆ.

ಬೆಂಗಳೂರು
26 Jun 2019

2014ರಲ್ಲಿ, ಡಾ. ಸಾಹಿಲ್ ನಿಝಾವಾನ್ ನೇತೃತ್ವದ ಸ್ಥಳೀಯ ಇಡು-ಮಿಷ್ಮಿ ಜನಾಂಗದ ಒಂದು ಸಂಶೋಧನಾ ತಂಡ ಮಧ್ಯಮ ಹಾಗೂ ದೊಡ್ಡ ಗಾತ್ರದ ಸಸ್ತನಿಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ, ಈಶಾನ್ಯ ಭಾರತದ ಅರುಣಾಚಲ ಪ್ರದೇಶದ ದಿಬಾಂಗ್ ಕಣಿವೆಯ ಕಾಡುಗಳಲ್ಲಿ ಕ್ಯಾಮೆರಾಗಳನ್ನು ಇರಿಸಿದ್ದರು. ೨೦ ತಿಂಗಳುಗಳ ನಂತರ, ಕ್ಯಾಮೆರಾಗಳಲ್ಲಿ ಸೆರೆ ಹಿಡಿದಿದ್ದ ವಿಚಿತ್ರ ಹಾಗೂ ಅನಿರೀಕ್ಷಿತ ದೃಶ್ಯಗಳನ್ನು ಕಂಡು ನಿಬ್ಬೆರಗಾದರು. ಒಂದೇ ಪ್ರಭೇದದ ಆರು ಪ್ರತ್ಯೇಕ ಬಣ್ಣ ವಿಧಗಳ, ಮಧ್ಯಮ ಗಾತ್ರದ ಏಷ್ಯಾದ ಕಾಡು ಬೆಕ್ಕುಗಳು ಈ ಕಣಿವೆಯಲ್ಲಿ ಇರುವುದು ಈ ಕ್ಯಾಮೆರಾಗಳ ಮುಖೇನ ತಿಳಿದು ಬಂದಿದೆ.

ಬೆಂಗಳೂರು
28 Aug 2019

 

ನೈಸರ್ಗಿಕ ವಿಕೋಪಗಳ ಪೈಕಿ ಭೂಕಂಪನವು ಅತಿ ವಿನಾಶಕಾರಿ ಮತ್ತು ಭಯ ಹುಟ್ಟಿಸುವಂತದ್ದು. ರಿಕ್ಟರ್ ಮಾಪಕದಲ್ಲಿ 5.0 ಅಥವಾ ಅದಕ್ಕಿಂತ ಹೆಚ್ಚಿನ ಪರಿಮಾಣದ ಸರಿಸುಮಾರು 5 ಭೂಕಂಪಗಳು ಪ್ರತಿದಿನ ಭೂಮಿಯ ಮೇಲೆ ಸಂಭವಿಸುತ್ತಲೇ ಇರುತ್ತವೆ. ಸ್ವತಃ ಭೂಕಂಪನಗಳೇ ವಿನಾಶಕಾರಿಯಾಗಿದ್ದು, ಇದರಿಂದ ಉಂಟಾಗಬಹುದಾದ ಸುನಾಮಿ ಅಲೆಗಳಿಂದಲೂ ತಮ್ಮ ಪ್ರಭಾವವನ್ನು ಬೀರಬಲ್ಲವಾಗಿವೆ. ಸಹಜವಾಗಿ  ಭೂಕಂಪನದ ತೀವ್ರತೆ, ಅಧಿಕೇಂದ್ರದಿಂದ ಇರುವ ದೂರ ಮತ್ತು ಆ ಪ್ರದೇಶದ ನೆಲದ ಸ್ವರೂಪ, ಹೀಗೆ ಕೆಲವು ಅಂಶಗಳು ಸಾಮಾನ್ಯವಾಗಿ ಭೂಕಂಪನದಿಂದ ಉಂಟಾಗುವ ಹಾನಿಯನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ.

ಬೆಂಗಳೂರು
20 Jan 2020

ನಾವೆಲ್ಲರೂ ಓದುವುದನ್ನು ಹೇಗೆ ಕಲಿತೆವು ಎಂದು ನೆನಪಿಸಿಕೊಂಡರೆ- ಮೊದಲಿಗೆ ನಾವು ಪ್ರತಿಯೊಂದು ಅಕ್ಷರ ಹೇಗೆ ಉಚ್ಚರಿಸುವುದು ಎಂದು ಕಲಿಯುತ್ತೇವೆ. ನಂತರ ಪೂರ್ತಿ ಪದ(ಗಳು)  ಮತ್ತು  ವಾಕ್ಯಗಳನ್ನು ಸುಲಭವಾಗಿ ಹೇಳಲು ಕಲಿಯುತ್ತೇವೆ. ಆದರೆ, ನಾವು ಓದಲು ಕಲಿಯುವಾಗ, ನಮ್ಮ ಮೆದುಳಿನಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Bengaluru
27 Dec 2019

1960ರಿಂದ, ಜಗತ್ತು ತನ್ನ ಉಷ್ಣವಲಯದ ಸುಮಾರು ಅರ್ಧದಷ್ಟು ಕಾಡುಗಳನ್ನು  ತೋಟಗಾರಿಕೆ, ಮರಕಡಿತ, ಕಾಡಿನ ಬೆಂಕಿ ಮತ್ತು ರೋಗಗಳಿಗೆ ಕಳೆದುಕೊಂಡಿದೆ ಎಂದು ನಿಮಗೆ ತಿಳಿದಿದೆಯೇ? ಪ್ರಸ್ತುತ, ವರ್ಷಕ್ಕೆ ಸುಮಾರು 8 ದಶಲಕ್ಷ ಹೆಕ್ಟೇರ್ ಉಷ್ಣವಲಯದ ಕಾಡುಗಳು ಕಳೆದುಹೋಗಿವೆ. ಉಷ್ಣವಲಯದ ಕಾಡುಗಳು ಜಾಗತಿಕ ಜೀವವೈವಿಧ್ಯತೆಯ ನೆಲೆಯಾಗಿರುವುದರಿಂದ,  ಇದು ಕೇವಲ ಜೀವವೈವಿಧ್ಯತೆಯ ಮೇಲೆ  ಪರಿಣಾಮ ಬೀರುವುದಲ್ಲದೇ, ೧.೬ ಶತಕೋಟಿ ಜನರ ಜೀವನದ ಮೇಲೆಯೂ ಪರಿಣಾಮ ಬೀರುತ್ತದೆ. ಆದರೂ, ಮಾನವ ಪ್ರಾಬಲ್ಯದ ಭೂದೃಶ್ಯಗಳಲ್ಲಿ, ಅವನತಿಗೀಡಾದ  ಕಾಡುಗಳ ಪುನಶ್ಚೇತನ, ಇದುವರೆಗೆ ಸಂಭವಿಸಿರುವ ನಷ್ಟಗಳನ್ನು ಹಿಮ್ಮೆಟ್ಟಿಸಲು ಮತ್ತು ಈ ಕಾಡುಗಳ ಚೇತರಿಕೆಗೆ ಸಹಾಯ ಮಾಡುತ್ತದೆ.