ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Society

ಬೆಂಗಳೂರು
5 Jun 2018

ಈ ವರ್ಷದ ‘ವಿಶ್ವ ಪರಿಸರ ದಿನ’ದ ಅಂಗವಾಗಿ ‘‘ಪ್ಲಾಸ್ಟಿಕ್ಕಿನಿಂದ ಮಾಲಿನ್ಯ ತಡೆಗಟ್ಟೋಣ’’ ಎಂದು ವಿಶ್ವ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಘೋಷಿಸಿದೆ. ಪ್ಲಾಸ್ಟಿಕ್ ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಅದರ ಬಗ್ಗೆ ಸರಿಯಾದ ಅರಿವು ಅತ್ಯವಶ್ಯಕ. 

ಬೆಂಗಳೂರು
30 Apr 2018

ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ. ದಿನೇದಿನೇ ಹೆಚ್ಚುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸುವ ಮಾರ್ಗವೆಂದರೆ, ಸರ್ಕಾರದ ಬೆಂಬಲದೊಂದಿಗೆ ಬಲವಾದ ಆರೋಗ್ಯ ಸೇವೆ ವ್ಯವಸ್ಥೆಯನ್ನು ನಿರ್ಮಿಸುವುದು ಮತ್ತು ಅದರ ಮುಖಾಂತರ, ಇಂತಹ ಖಾಯಿಲೆಗಳಿಗೆ ಔಷಧಿಗಳನ್ನು ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಲಭ್ಯವಿರುವಂತೆ ಮಾಡುವುದು.

ಪುಣೆ
17 Apr 2018

ಕಳೆದ ವಾರ, ಭಾರತೀಯ ಹವಾಮಾನ ಇಲಾಖೆಯು, ಈ ವರ್ಷದ ಮುಂಗಾರು ಸಾಮಾನ್ಯವಾಗಿರುತ್ತದೆ ಎಂದು ಊಹಿಸಿದೆ. ಆದರೆ ನಾವಿನ್ನೂ ಬೇಸಿಗೆಯ ತಿಂಗಳುಗಳಲ್ಲಿಯೇ ಇದ್ದೇವಲ್ಲವೇ? ನಮ್ಮ ರೈತರು ಬೀಜಗಳನ್ನು ಬಿತ್ತನೆ ಮಾಡಲು ಮತ್ತು ತಮ್ಮ ನೀರಾವರಿ ಸಂಪನ್ಮೂಲಗಳನ್ನು ಸನ್ನದ್ಧವಾಗಿಸಿಕೊಳ್ಳಲು, ನಾಗರಿಕ ಸೇವಾ ಅಧಿಕಾರಿಗಳು ಗೃಹಬಳಕೆ ಮತ್ತು ಕೈಗಾರಿಕಾ ಬಳಕೆಗಾಗಿ ನೀರಿನ ವಿತರಣೆಯನ್ನು ಯೋಜಿಸಲು ಈ ಮಾಹಿತಿ ಬೇಕು, ನಿಜ; ಆದರೆ ಸಮಯಕ್ಕೆ ಮುಂಚಿತವಾಗಿ ಈ ನಿಖರ ಊಹೆಯನ್ನು ಇಲಾಖೆಯ ವಿಜ್ಞಾನಿಗಳು ಹೇಗೆ ಮಾಡಿದರು? ಮುಂಗಾರಿನ ಮೇಲೆ ನಮ್ಮ ದೇಶದ ಹೆಚ್ಚಿನ ಜನರು ಅವಲಂಬಿತರಾಗಿರುವ ಕಾರಣ, ಅದರ ಆಗಮನದ ಊಹೆಯನ್ನು ನಿಖರವಾಗಿ ಮಾಡುವ ಕಲೆಯಲ್ಲಿ ವಿಜ್ಞಾನಿಗಳು ಪರಿಪೂರ್ಣರಾಗುವುದು ಅತ್ಯಾವಶ್ಯಕ.

Kodaikanal
24 Mar 2018

ಪಶ್ಚಿಮ ಘಟ್ಟ ಶ್ರೇಣಿ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿದ ಮಾನವ ಚಟುವಟಿಕೆಗಳು ಈ ಹಚ್ಚ ಹಸುರಿನ ಕಾಡುಗಳ ಉಳಿವಿಗೆ ಬೆದರಿಕೆ ಒಡ್ಡುತ್ತಿವೆ. ಇಂತಹ ಬದಲಾವಣೆಗಳನ್ನು ನಿಖರವಾಗಿ ತಿಳಿಯಲು ಸಂಶೋಧಕರು 40 ವರ್ಷಗಳಲ್ಲಿ ಸಸ್ಯವರ್ಗದ ಹೊದಿಕೆಯಲ್ಲಾದ ಬದಲಾವಣೆಗಳನ್ನು ಅಧ್ಯಯನ ಮಾಡಿದ್ದಾರೆ.

ಬೆಂಗಳೂರು
31 Dec 2017

ಕಳೆದ ಕೆಲವು ದಶಕಗಳಲ್ಲಿ ಭಾರತದ ವಿಜ್ಞಾನ ಕ್ಷೇತ್ರವು ಅಪಾರ ವೇಗದಿಂದ ಔನತ್ಯದೆಡೆಗೆ ಮುನ್ನಡೆಯುತ್ತಿದ್ದು, ಇದರ ಹಿಂದಿರುವ ಕಾರಣ ಇಲ್ಲಿ ಯಥೇಚ್ಛವಾಗಿ ಲಭ್ಯವಿರುವ ಪ್ರತಿಭೆ ಮತ್ತು ಮೂಲಭೂತ ಸೌಕರ್ಯ. ಖಗೋಳಶಾಸ್ತ್ರದಿಂದ ಮೊದಲ್ಗೊಂಡು ಜೀವಶಾಸ್ತ್ರದವರೆಗೂ, ರಸಾಯನಶಾಸ್ತ್ರದಿಂದ ಕೃಷಿಯವರೆಗೂ ಎಲ್ಲಾ ವೈಜ್ಞಾನಿಕ ಕ್ಷೇತ್ರಗಳನ್ನೂ ಒಳಗೊಂಡಂತೆ ಹೆಮ್ಮೆ ಪಡಬೇಕಾದ ಹಲವಾರು ಸಾಧನೆಗಳು, ಅದರ ಹಿಂದಿನ ವಿಜ್ಞಾನಿಗಳು ಇಲ್ಲಿರುವುದು ಸಂತಸದ ಸತ್ಯ; ಆದರೆ ೨೦೧೭ ಹೇಗೆ ವಿಭಿನ್ನವಾಗಿತ್ತು? ಭಾರತೀಯ ವೈಜ್ಞಾನಿಕ ಸಮುದಾಯದಿಂದ ಕೆಲವು ಪ್ರಮುಖ ಸಂಶೋಧನಾ ಮುಖ್ಯಾಂಶಗಳು ಯಾವುವು?