ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Technology

ಬೆಂಗಳೂರು
17 Jul 2019

ಭಾರತ - ಜಗತ್ತಿನ ಅತೀ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಗಳಲ್ಲಿ ಅಗ್ರ ರಾಷ್ಟ್ರ. ಜೊತೆಗೆ ಅತೀ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಎರಡನೇ ರಾಷ್ಟ್ರ. ಆದರೆ ದುರದೃಷ್ಟದ ಸಂಗತಿಯೇನು ಗೊತ್ತೆ? ಭಾರತದ ಸುಮಾರು 15% ಜನ ಇಂದಿಗೂ ಕತ್ತಲೆಯಲ್ಲೆ ಜೀವನ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಕೇವಲ ಸರ್ಕಾರ ಎಂದರೆ ತಪ್ಪಾಗಬಹುದು. ಭಾರತದ ವಿದ್ಯುತ್ ಪೂರೈಕೆಗೆ ಒಂದೆಡೆ ಅರ್ಥಿಕ ಹಾಗೂ ನೈಸರ್ಗಿಕ ಸಂಪನ್ಮೂಲದ ಕೊರತೆ ಇದ್ದರೆ, ಇನ್ನೊಂದೆಡೆ ಪರಿಸರ ರಕ್ಷಣೆಯ ದೊಡ್ಡ ಜವಾಬ್ದಾರಿಯೂ ತಡೆಯಾಗಿ ನಿಂತಿದೆ. ವಿಶ್ವದ ಅನೇಕ ದೇಶಗಳು ಈಗಾಗಲೆ ನವೀಕರಿಸಬಹುದಾದ ಇಂಧನಗಳ ಸಂಪೂರ್ಣ ಉಪಯೋಗವನ್ನು ಪಡೆದುಕೊಳ್ಳತೊಡಗಿವೆ.

ಬೆಂಗಳೂರು
15 ಮೇ 2019

ವೈದ್ಯರ ಬಳಿ ಹುಶಾರಿಲ್ಲದೆ ತೆರಳಿದಾಗ ನನಗೆ ಇಂಜೆಕ್ಷನ್ (ಚುಚ್ಚುಮದ್ದು) ಬೇಡವೇ, ಬೇಡ ಎಂದು ಹಠ ಮಾಡಿದ್ದೀರ? ನೀವು ಬೇಡವೆಂದರೂ ರೋಗಕ್ಕೆ ಚುಚ್ಚುಮದ್ದು ಅನಿವಾರ್ಯ ಎಂದು ವೈದ್ಯರು ಕಥೆ ಹೇಳಿ ನಿಮಗೆ ಚುಚ್ಚಿ ನೋವುಂಟು ಮಾಡಿದ್ದಾರಾ? ಮಿತ್ರರೆ, ನಿಮಗೊಂದು ಶುಭಸುದ್ದಿ ಕಾದಿದೆ. ‘ಹಳೆಯ ನೋವನ್ನು’ ಮರೆಯುವ ಸಲುವಾಗಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ಯ ವಿಜ್ಞಾನಿಗಳು ಸೂಜಿ-ಮುಕ್ತ, ನೋವುರಹಿತ ಔಷಧಿ ವಿತರಣೆಯ ಹೊಸ ವಿಧಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಆಶ್ಚರ್ಯವಾಗುತ್ತಿದೆಯೆ? ಈ ತಂತ್ರಜ್ಞಾನವನ್ನು ವಾಣಿಜ್ಯೀಕರಣಗೊಳಿಸಿದಲ್ಲಿ ಅತೀ ಶೀಘ್ರದಲ್ಲೆ ಔಷಧಿ ವಿತರಣೆಯಲ್ಲಿ ಬಳಸುವ ಚುಚ್ಚುಮದ್ದುಗಳನ್ನು ಬದಲಿಸಬಹುದು.

Bengaluru
3 Jan 2019

ಹೊಸ ವರ್ಷ ಬಂದಾಯಿತು, ಆದರೆ ನಾವಿನ್ನು ೨೦೧೮ರ ವರ್ಷಾಗಮನವನ್ನು ಕಳೆದ ವರ್ಷದಲ್ಲಿ ಪ್ರಾರಂಭಿಸಿದ ಕೆಲವು ಚಟುವಟಿಗೆಗಳನ್ನು ಮೆಲಕು ಹಾಕುತ್ತಿದ್ದೇವೆ. ಅವುಗಳಲ್ಲಿ ಪ್ರಮುಖವಾದುದ್ದು  ಪ್ರಾದೇಶಿಕ ಭಾಷೆಗಳಲ್ಲಿ ವೈಜ್ಞಾನಿಕ ಲೇಖನಗಳನ್ನು ಹೊರತರುವುದು. ಪ್ರಾರಂಭಿಕವಾಗಿ ನಾವು ಮೊದಲು ಕನ್ನಡದಲ್ಲಿ ಲೇಖನಗಳನ್ನು ಈಗ ಕಳೆದು ಮೂರು-ನಾಲ್ಕು ವರ್ಷಗಳಿಂದ ಬರೆಯುತ್ತಿದ್ದೇವೆ. ಇದಕ್ಕೆ ನಮಗೆ 'ಪ್ರಜಾವಾಣಿ'ಯಿಂದಲೂ ಬಹಳಷ್ಟು ಪ್ರೋತ್ಸಾಹ ದೊರೆಯಿತು. ಪ್ರತಿ ಸೋಮವಾರ, 'ವಿಜ್ಞಾನ ಲೋಕದಿಂದ' ಎಂಬ ಅಂಕಣದಲ್ಲಿ ನಮ್ಮ ಲೇಖನಗಳು ಮುದ್ರಣವಾಗುತ್ತಿತ್ತು. ಕಳೆದ ವರ್ಷ ನಾವು ಹಿಂದಿ, ಮರಾಠಿ ಮತ್ತು ಅಸ್ಸಾಮೀಸ್ ನಲ್ಲೂ ಲೇಖನಗಳನ್ನು ಪ್ರಕಟಿಸಲು ಪ್ರಾರಂಭಿಸಿದೆವು. ಈ ವರ್ಷ ಇನ್ನಷ್ಟು ಪ್ರಾದೇಶಿಕ ಭಾಷೆಗಳಲ್ಲಿ  ಬಹಳಷ್ಟು ಲೇಖನಗಳು, ಪಾಡ್ಕ್ಯಾಸ್ಟ್ಗಳು, ಮತ್ತು ಇತರೆ ರೀತಿಯಲ್ಲಿ ಪ್ರಕಟಿಸಬೇಕೆಂದಿದ್ದೇವೆ. ಇಲ್ಲಿ ಕಳೆದ ವರ್ಷ ಪ್ರಾದೇಶಿಕ ಭಾಷೆಯಲ್ಲಿ ಪ್ರಕಟಿಸಿದ ಕೆಲವು ಆಯ್ದ ಲೇಖನಗಳನ್ನು ನಿಮ್ಮೊಡನೆ ಹಂಚಿಕೊಳ್ಳುತ್ತಿದ್ದೇವೆ.

ಮುಂಬೈ
18 Apr 2018

ಭಾರತೀಯ ತಂತ್ರಜ್ಞಾನ ಸಂಸ್ಥೆ ಬಾಂಬೆಯ (ಐಐಟಿ ಬಾಂಬೆ) ಪ್ರಾಧ್ಯಾಪಕರಾದ ಪ್ರೊ. ಅಮಿತ್ ಅರೋರಾ ಮತ್ತು ಸಂಗಡಿಗರು ದಾಳಿಂಬೆ ಬೀಜದಿಂದ ಎಣ್ಣೆಯನ್ನು ತೆಗೆಯುವ ನವೀನ ವಿಧಾನವನ್ನು ಪ್ರಸ್ಥಾಪಿಸಿದ್ದಾರೆ. ಈ ವಿಧಾನವು ಅತ್ಯoತ ಅಗ್ಗವಾಗಿಯೂ, ತ್ಯಾಜ್ಯ ರಹಿತವಾಗಿಯೂ ಇದ್ದು ಅತೀ ಹೆಚ್ಚು ಗುಣಮಟ್ಟದ ಪ್ರೋಟೀನ್ (ಸಸಾರಜನಕ ಆಹಾರ ಪದಾರ್ಥ) ಮತ್ತು ನಾರಿನ ಅಂಶ ನೀಡಬಲ್ಲದು.

24 Feb 2018

ನೀವು ಪತ್ತೇದಾರಿ ಕಾದಂಬರಿಗಳ, ಟಿವಿ ಕಾರ್ಯಕ್ರಮಗಳ ಅಭಿಮಾನಿಯೇ? ಹಾಗಿದ್ದಲ್ಲಿ, ಅಪರಾಧಿಯನ್ನು ಗುರುತಿಸಲು ಡಿಎನ್ಎ ಬೆರಳಚ್ಚು ವಿಧಾನವು ಅತ್ಯುಪಯುಕ್ತ ಸಾಧನ ಎಂದು ನೀವು ಖಂಡಿತ ತಿಳಿದಿರುತ್ತೀರಿ.