ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು
ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು
ನಾವೆಲ್ಲರೂ ಓದುವುದನ್ನು ಹೇಗೆ ಕಲಿತೆವು ಎಂದು ನೆನಪಿಸಿಕೊಂಡರೆ- ಮೊದಲಿಗೆ ನಾವು ಪ್ರತಿಯೊಂದು ಅಕ್ಷರ ಹೇಗೆ ಉಚ್ಚರಿಸುವುದು ಎಂದು ಕಲಿಯುತ್ತೇವೆ. ನಂತರ ಪೂರ್ತಿ ಪದ(ಗಳು) ಮತ್ತು ವಾಕ್ಯಗಳನ್ನು ಸುಲಭವಾಗಿ ಹೇಳಲು ಕಲಿಯುತ್ತೇವೆ. ಆದರೆ, ನಾವು ಓದಲು ಕಲಿಯುವಾಗ, ನಮ್ಮ ಮೆದುಳಿನಲ್ಲಿ ಯಾವ ರೀತಿಯ ಬದಲಾವಣೆಗಳಾಗುತ್ತವೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರ ಒಂದು ತಂಡ ಪಶ್ಚಿಮ ಘಟ್ಟಗಳ ಹಾವುಗಳನ್ನು ಕ್ರಮಬದ್ಧವಾಗಿ ಅಧ್ಯಯನ ನಡೆಸಲು ಪ್ರಯತ್ನಿಸುತ್ತಿದ್ದರು. ಈ ಕ್ರಮಬದ್ಧ ಅಧ್ಯಯನ ನಡೆಸುವಾಗ ಪಶ್ಚಿಮ ಘಟ್ಟಗಳ ಕಾಡುಗಳಿಗೆ ಸ್ವಂತವಾದ “ಪ್ರೊಹೇಟುಲ್ಲಾ ಆಂಟಿಕಾ” ಎನ್ನುವ ಒಂದು ಬಳ್ಳಿಹಾವನ್ನು ಅಕಸ್ಮಾತಾಗಿ ಕಂಡರು. ಇದು ಒಂದು ಪುರಾತನ ಪ್ರಭೇದವೆಂದು, ಸುಮಾರು ೨೬ ಮಿಲಿಯನ್ ವರುಷಗಳ ಹಿಂದೆ, ಮಧ್ಯ ಒಲಿಗೋಸೀನ್ ಯುಗದಲ್ಲಿ ವಿಕಾಸನಗೊಂಡಿತೆಂದು ಅಂದಾಜಿಸಲಾಗಿದೆ.
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಶ್ರೀಕಾಂತ್ ದೇವಧರ್ ಮತ್ತು ಕವಿತಾ ಈಶ್ವರನ್ ರವರು, ಅತ್ಯಂತ ಆಕರ್ಷಕವಾದ ಪುರುಷ ಅಗಾಮಗಳು (ಹಲ್ಲಿಗಳು) ಪ್ರದರ್ಶಿಸುವ ವಿವಿಧ ವರ್ತನೆಯ ಸಂಕೇತಗಳ ಅರ್ಥವನ್ನು ಡಿಕೋಡ್ ಮಾಡಲು ತಮ್ಮ ಹೊಸ ಅಧ್ಯಯನದಲ್ಲಿ ಪ್ರಯತ್ನಿಸಿದ್ದಾರೆ.
ಒಂದು ಕಾಲದಲ್ಲಿ ಶ್ವೇತವರ್ಣದ ಹಿಮವರ್ಷಗಳಿಂದ ಕಂಗೊಳಿಸುತ್ತಿದ್ದ, ಚಳಿಗಾಲದಲ್ಲಿ ತನ್ನದೆ ಆದ ವೈಶಿಷ್ಟ್ಯತೆಗಳಿಂದ ವಿಶ್ವದ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದ ಶಿಮ್ಲಾದ ಪ್ರಖ್ಯಾತ ಪಟ್ಟಣ ಇಂದು ಇತಿಹಾಸದಲ್ಲೇ ಕಂಡು ಕೇಳರಿಯದ ನೀರಿನ ಬಿಕ್ಕಟ್ಟನ್ನು ಅನುಭವಿಸುತ್ತಿದೆ. ೨೦೧೫-೧೬ ಅವಧಿಯಲ್ಲಿ ಆವರಿಸಿದ ಬರಗಾಲವು ಮರಾಠಾವಾಡಾದ ರೈತರ ಜೀವನವನ್ನು ಸಂಪೂರ್ಣವಾಗಿ ದಿಕ್ಕೆಟ್ಟಿಸಿತ್ತು. ಇಂತಹ ಅನೇಕ ಸಂದರ್ಭಗಳು, ಸನ್ನಿವೇಶಗಳು, ಭಾರತದಲ್ಲಿ ನದಿಗಳ ಮಹತ್ವ ಏನೆಂಬುದನ್ನು ತೋರಿಸಿಕೊಟ್ಟಿವೆ. ನದಿಗಳು ನಮ್ಮ ದೇಶದೊಂದಿಗೆ ಕೇವಲ ನೈಸರ್ಗಿಕವಾದ ಸಂಬಂಧವನ್ನು ಹೊಂದಿಲ್ಲ; ನಾಡಿನ ಜನರ ನಾಡಿಮಿಡಿತದೊಂದಿಗೆ ಭಾವನಾತ್ಮಕವಾದ ಸಂಬಂಧವನ್ನೂ ಹೊಂದಿವೆ.
ಮನುಷ್ಯರ ಸಮಾಜದಲ್ಲಿ ಇರುವ ಜಾತಿಭೇದವು ಪ್ರಾಣಿ ಜಗತ್ತಿನಲ್ಲಿ ಇಲ್ಲ ಎಂದರೆ ನಂಬುತ್ತೀರಾ? ಇಲ್ಲಿ ನಾವು ಹೇಳಹೊರಟಿರುವುದು ಪ್ರಭೇದಗಳ ಗಡಿಯ ಆಚೆಗೂ ಗೆಳೆತನ ವಿಸ್ತರಿಸಿಕೊಳ್ಳುವ ಪ್ರಾಣಿಗಳ ಬಗ್ಗೆ. ಜನಪ್ರಿಯ ಅನಿಮೇಟೆಡ್ ಚಿತ್ರ 'ಐಸ್ ಏಜ್'ನಲ್ಲಿ ಪ್ರಾಚೀನ ಶಿಲಾಯುಗದ ಹಿಮಯುಗಕ್ಕೆ ಸಂಬಂಧಿಸಿದ ಕತೆಯಿದೆ; ಈ ಸಿನಿಮಾದ ಪ್ರಮುಖ ಪಾತ್ರಗಳು ಸೋಮಾರಿ ಸಲಗ ಮತ್ತು ಸಂಶಯಾಸ್ಪದ ನಡತೆಯ ಹುಲಿಯದ್ದು; ಇವು ಪೂರಕ ವಾತಾವರಣವಿಲ್ಲದ ಸ್ಥಿತಿಯಲ್ಲಿ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳಲು, ತಮ್ಮ ಪ್ರಭೇದಗಳ ವ್ಯತ್ಯಾಸಗಳನ್ನು ಮರೆತು, ಒಗ್ಗೂಡಿ, ತಮ್ಮ ಜೀವನಪ್ರಯಾಣದಲ್ಲಿ ಪರಸ್ಪರ ಸಹಾಯ ಮಾಡಿಕೊಳ್ಳುತ್ತವೆ. ವಿಭಿನ್ನ ಜಾತಿಗಳಿಗೆ ಸೇರಿದ ಪ್ರಾಣಿಗಳ ನಡುವಿನ ಸ್ನೇಹದ ಅತ್ಯುತ್ತಮ ಉದಾಹರಣೆಯಿದು.
ಶುಷ್ಕ ಹುಲ್ಲುಗಾವಲುಗಳು ಮತ್ತು ರಸಭರಿತ ಸಸ್ಯಗಳನ್ನುಳ್ಳ ಮರುಭೂಮಿಗಳು - ಇವೆಲ್ಲಾ ಒಣ ಭೂಪರಿಸರ ವ್ಯವಸ್ಥೆಗಳು ಎನಿಸಿಕೊಳ್ಳುತ್ತವೆ; ಭೂಮಿಯ ಮೇಲ್ಮೈಯ ಸುಮಾರು ೪೦% ಸ್ಥಳವನ್ನು ಇವೇ ಆವರಿಸಿಕೊಂಡಿವೆ. ಸಾಮಾನ್ಯವಾಗಿ ಇವನ್ನು ಜನರು 'ತ್ಯಾಜ್ಯಭೂಮಿಗಳು' ಎಂದು ಕಡೆಗಣಿಸಿದರೂ, ಪರಿಸರ ಸಮತೋಲನದಲ್ಲಿ ಇವು ಕೂಡ ಬಹಳ ಮಹತ್ವದ ಪಾತ್ರ ನಿರ್ವಹಿಸುತ್ತವೆ; ಈ ಒಣ ಭೂಪರಿಸರ ವ್ಯವಸ್ಥೆಯು ನೀರಿನ ಕೊರತೆಯಿರುವ ಪರಿಸರಕ್ಕೆ ಹೊಂದಿಕೊಳ್ಳುವ ವಿಶಿಷ್ಟ ಸಸ್ಯಗಳು ಮತ್ತು ಪ್ರಾಣಿಗಳಿಗೆ ನೆಲೆಯಾಗಿರುತ್ತವೆ.
ಮರೆಗುಳಿತನದ ಸಾಮಾನ್ಯ ವಿಧವಾಗಿರುವ ಅಲ್ಝೈಮರ್ ಅನ್ನು ಔಷಧೋಪಚಾರದ ಸಹಾಯದಿಂದ ತಕ್ಕಮಟ್ಟಿಗೆ ನಿಯಂತ್ರಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆದಿವೆ.
ಗೆದ್ದಲು ಅಂದರೆ ಸಾಮಾನ್ಯವಾಗಿ ಎಲ್ಲರೂ ಪೀಠೋಪಕರಣ, ಬಾಗಿಲು ಕಿಟಕಿಗಳನ್ನು ಹಾಳುಗೆಡವುವ ಕೀಟ ಎಂದುಕೊಳ್ಳಬಹುದೇನೋ. ಆದರೆ, ಕೆಲವು ಬಗೆಯ ಗೆದ್ದಲುಗಳಿಗೆ ಸಿಗಬೇಕಾದ ಮೆಚ್ಚುಗೆ ಸಿಕ್ಕಿಲ್ಲ ಎಂಬುದು ಸತ್ಯ. ಏಕೆ ಗೊತ್ತೇ? ಅವು ಭೂಮಿಯ ಮೇಲಿನ ಮೊದಲ 'ರೈತರು' ಎಂಬುದು ಸಂಶೋಧನೆಯೊಂದರಿಂದ ಕಂಡುಬಂದಿದೆ; ಕೆಲವು ಬಗೆಯ ಗೆದ್ದಲುಗಳು, ತಮ್ಮದೇ ಆದ ಆಹಾರವನ್ನು ಬೆಳೆಯುತ್ತವೆಯಂತೆ! ಅವುಗಳ ತೋಟಗಳು ನಮ್ಮ ತೋಟಗಳಂತೆ ಇರುವುದಿಲ್ಲ ನಿಜ; ಆದರೆ ಆಹಾರಕ್ಕಾಗಿ ತಮ್ಮ ಗೂಡುಗಳಲ್ಲಿ ವಿವಿಧ ಬಗೆಯ ಶಿಲೀಂಧ್ರಗಳನ್ನು ಬೆಳೆಯುತ್ತವೆ. ಪ್ರತಿಯಾಗಿ, ಆ ಶಿಲೀಂಧ್ರಗಳ ಬೆಳವಣಿಗೆಗೆ ಸಹಾಯವಾಗಲೆಂದೇ ಹಲವು ಪದಾರ್ಥಗಳನ್ನು ಪೂರೈಕೆ ಮಾಡುತ್ತಾ ಪರಸ್ಪರ ಸಂಬಂಧವನ್ನು ಸುಲಲಿತಾಗಿ ನಿರ್ವಹಿಸುತ್ತವೆ.